Webdunia - Bharat's app for daily news and videos

Install App

ದೇವರೇ ನನ್ನನ್ನು ರಕ್ಷಿಸುತ್ತಾನೆ, ನನಗೆ ಭದ್ರತೆ ಬೇಡ: ಅರವಿಂದ್ ಕೇಜ್ರಿವಾಲ್

Webdunia
ಮಂಗಳವಾರ, 24 ಡಿಸೆಂಬರ್ 2013 (16:17 IST)
PTI
ದೆಹಲಿ ಮುಖ್ಯಮಂತ್ರಿ ಗದ್ದುಗೆ ಅಲಂಕರಿಸಲಿರುವ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ದೇವರು ನನ್ನನ್ನು ರಕ್ಷಿಸುತ್ತಾನೆ. ನನಗೆ ಯಾವ ರೀತಿಯ ಭಧ್ರತೆ ಬೇಡ ಎಂದು ದೆಹಲಿ ಪೊಲೀಸರ ಮನವಿಯನ್ನು ತಳ್ಳಿಹಾಕಿದ್ದಾರೆ.

ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ 28 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಎರಡನೇ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆಪ್ ಪಕ್ಷದ ಸಂಸ್ಥಾಪಕ 44 ವರ್ಷ ವಯಸ್ಸಿನ ಅರವಿಂದ್ ಕೇಜ್ರಿವಾಲ್ ಡಿಸೆಂಬರ್ 26 ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ತಮ್ಮ ಸಂಪುಟದಲ್ಲಿರುವ ಸಚಿವರು ಐಷಾರಾಮಿ ಸರಕಾರಿ ಬಂಗಲೆ ಅಥವಾ ಕೆಂಪು ದ್ವೀಪಗಳನ್ನು ಹೊಂದಿರುವ ಕಾರುಗಳನ್ನು ಬಳಸುವುದಿಲ್ಲ. ಜನಸಾಮಾನ್ಯರಂತೆ ಕಾರ್ಯನಿರ್ವಹಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಕಳೆದ 15 ವರ್ಷಗಳಿಂದ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷ ಕೇಜ್ರಿವಾಲ್ ಸರಕಾರಕ್ಕೆ ಬಾಹ್ಯವಾಗಿ ಬೆಂಬಲ ನೀಡುತ್ತಿದೆ. ಬಿಜೆಪಿ ಪಕ್ಷ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಬಹುಮತದ ಕೊರತೆಯಿಂದಾಗಿ ಸರಕಾರ ರಚಿಸಲು ನಿರಾಕರಿಸಿತ್ತು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments