Webdunia - Bharat's app for daily news and videos

Install App

ನರೇಂದ್ರ ಮೋದಿಗೆ ಹೀಯಾಳಿಸುವುದು ಮಾತ್ರ ಗೊತ್ತು: ದಿಗ್ವಿಜಯ್ ಸಿಂಗ್

Webdunia
ಮಂಗಳವಾರ, 19 ನವೆಂಬರ್ 2013 (15:29 IST)
PTI
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಗೆ ದೇಶದ ಬಗ್ಗೆ ದೂರದೃಷ್ಠಿಯಿಲ್ಲವಾದ್ದರಿಂದ ಮತದಾರರ ಮೇಲೆ ಪ್ರಭಾವ ಬೀರುವಲ್ಲಿ ವಿಫಲವಾಗಿದ್ದಾರೆ. ಮೋದಿಗೆ ಕೇವಲ ಮತ್ತೊಬ್ಬರನ್ನು ಹೀಯಾಳಿಸುವುದು ಮಾತ್ರ ಗೊತ್ತಿದೆ ಎಂದು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಲೇವಡಿ ಮಾಡಿದ್ದಾರೆ.

ನಾನು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದ ಜನಪರ ಯೋಜನೆಗಳನ್ನು ತಾವೇ ಜಾರಿಗೆ ತಂದಿರುವುದಾಗಿ ಹೇಳಿಕೊಂಡು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಮತದಾರರಿಗೆ ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ಅವರಿಗೆ ತಾಕತ್ತಿದ್ರೆ ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲೆಸೆದಿದ್ದಾರೆ.

ದೇಶದ ಮತ್ತು ಭಾರತೀಯ ಜನಸಂಘದ ಇತಿಹಾಸವನ್ನು ನಿರ್ಲಕ್ಷಿಸುತ್ತಿರುವ ಮೋದಿಯ ಬಗ್ಗೆ ಜನತೆಗೆ ಭ್ರಮನಿರಸನವಾಗಿದೆ. ಇದೀಗ ಮತದಾರರಿಗೆ ಮೋದಿಯ ಪೊಳ್ಳುತನದ ಬಗ್ಗೆ ಅರಿವಾಗಿದೆ ಎಂದು ಚುನಾವಣೆ ಪ್ರಚಾರದಲ್ಲಿ ಗುಡುಗಿದ್ದಾರೆ.

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಸೋನಿಯಾ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ದಿಗ್ವಿಜಯ್, ಮುಖ್ಯಮಂತ್ರಿಗಳ ಕುಟುಂಬದ ಭ್ರಷ್ಟಾಚಾರದ ಬಗ್ಗೆ ನ್ಯಾಯಾಲಯದಲ್ಲಿ ಸಾಬೀತುಪಡಿಸುವಷ್ಟು ಸಾಕ್ಷ್ಯಾಧಾರಗಳು ನನ್ನ ಬಳಿಯಿವೆ ಎಂದು ತಿಳಿಸಿದ್ದಾರೆ.

ಮಧ್ಯಪ್ರದೇಶದಲ್ಲಿ ಬಿಜೆಪಿ 2003ರಲ್ಲಿ ಅಧಿಕಾರಕ್ಕೆ ಬರುವ ಮುನ್ನ ಹತ್ತು ವರ್ಷಗಳ ಕಾಲ ದಿಗ್ವಿಜಯ್ ಸಿಂಗ್ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments