Webdunia - Bharat's app for daily news and videos

Install App

ನರೇಂದ್ರ ಮೋದಿ ಮಹಾತ್ಮಾ ಗಾಂಧಿಯನ್ನು ಹತ್ಯೆಮಾಡಿದ ಆರೆಸ್ಸೆಸ್ ಪ್ರತಿಪಾದಕ: ರಾಹುಲ್ ಗಾಂಧಿ

Webdunia
ಶುಕ್ರವಾರ, 14 ಮಾರ್ಚ್ 2014 (14:13 IST)
PTI
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮಹಾತ್ಮಾ ಗಾಂಧಿಯನ್ನು ಹತ್ಯೆ ಮಾಡಿದ ಆರೆಸ್ಸೆಸ್ ಸಿದ್ಧಾಂತವನ್ನು ಪ್ರತಿನಿಧಿಸುತ್ತಾರೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಸರ್ಧಾರ್ ಪಟೇಲ್ ಅವರ ಭವ್ಯ ಮೂರ್ತಿಯ ನಿರ್ಮಾಣದ ಬಗ್ಗೆ ಲೇವಡಿ ಮಾಡಿದ ರಾಹುಲ್, ಆರೆಸ್ಸೆಸ್ ಸಿದ್ಧಾಂತಗಳು ವಿಷಕಾರಿಯಾಗಿವೆ ಎಂದು ವರ್ಣಿಸಿದ್ದ ಸರ್ದಾರ್ ಪಟೇಲ್‌ರ ಭವ್ಯ ಮೂರ್ತಿಯನ್ನು ಆರೆಸ್ಸೆಸ್‌ ಪ್ರತಿನಿಧಿಸುತ್ತಿರುವವರಿಂದ ನಿರ್ಮಾಣವಾಗುತ್ತಿರುವುದು ವಿಷಾದನಿಯ. ಕಾಂಗ್ರೆಸ್ ಚಿಂತನೆಗಳನ್ನು ಅಳಿಸಹಾಕಬೇಕು ಎನ್ನುವುದೇ ಮೋದಿ ಬಯಕೆಯಾಗಿದೆ ಎಂದು ಗುಡುಗಿದರು.

ಕಾಂಗ್ರೆಸ್ ಮುಖಂಡ ಮಣಿಶಂಕರ್ ಅಯ್ಯರ್ ಅವರ ಚಾಯಿವಾಲಾ ಹೇಳಿಕೆಗೆ ಸಮಜಾಯಿಷಿ ನೀಡಲು ಪ್ರಯತ್ನಿಸಿದ ರಾಹುಲ್ ಗಾಂಧಿ, ದೇಶದ ಪ್ರತಿಯೊಬ್ಬ ಜನರು ಹಲವಾರು ರೀತಿಯ ವೃತ್ತಿಯಲ್ಲಿ ತೊಡಗಿರುತ್ತಾರೆ. ಪ್ರತಿಯೊಬ್ಬರನ್ನು ಗೌರವಿಸುವುದು ಇತರರ ಕರ್ತವ್ಯವಾಗಿದೆ ಎಂದರು.

ಸಾರ್ವಜನಿಕ ಸಭೆಯಲ್ಲಿ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಮೋದಿಯ ದುರಾಡಳಿತ, ರಾಜ್ಯ ಎದುರಿಸುತ್ತಿರುವ ಹಲವಾರು ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದರು.

ಸರ್ಧಾರ್ ವಲ್ಲಭಭಾಯಿ ಪಟೇಲ್ ಮತ್ತು ಮಹಾತ್ಮಗಾಂಧಿಯವರ ಹೇಳಿಕೆಗಳ ಬಗ್ಗೆ ಮೋದಿಗೆ ಜ್ಞಾನವಿಲ್ಲ. ಅವರ ಇತಿಹಾಸವನ್ನು ತಿಳಿಯದನ್ನು ಬಿಟ್ಟು ಭವ್ಯಮೂರ್ತಿಯ ನಿರ್ಮಾಣ ಮಾಡುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ರಾಹುಲ್ ಗಾಂಧಿ ಲೇವಡಿ ಮಾಡಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments