Select Your Language

Notifications

webdunia
webdunia
webdunia
webdunia

ನರೇಂದ್ರ ಮೋದಿ ಮುಸ್ಲಿಮರನ್ನು ಓಲೈಸುವುದರಲ್ಲಿ ನಿರತರಾಗಿದ್ದಾರೆ: ಉದ್ಭವ್ ಠಾಕ್ರೆ ಆಕ್ರೋಶ

ನರೇಂದ್ರ ಮೋದಿ ಮುಸ್ಲಿಮರನ್ನು ಓಲೈಸುವುದರಲ್ಲಿ ನಿರತರಾಗಿದ್ದಾರೆ: ಉದ್ಭವ್ ಠಾಕ್ರೆ ಆಕ್ರೋಶ
ಮುಂಬೈ , ಸೋಮವಾರ, 2 ಡಿಸೆಂಬರ್ 2013 (17:06 IST)
PTI
ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮುಸ್ಲಿಮರನ್ನು ಓಲೈಸುವುದರಲ್ಲಿ ನಿರತರಾಗಿದ್ದಾರೆ ಎಂದು ಎನ್‌ಡಿಎ ಮೈತ್ರಿಕೂಟದ ಶಿವಸೇನೆ ಪಕ್ಷದ ಮುಖ್ಯಸ್ಥ ಉದ್ಭವ್ ಠಾಕ್ರೆ ಕಿಡಿಕಾರಿದ್ದಾರೆ.

ನರೇಂದ್ರ ಮೋದಿಯವರ ಸಾರ್ವಜನಿಕ ಸಭೆಗೆ ಮುಸ್ಲಿಮರನ್ನು ಕರೆತರಲು ವಿಶೇಷ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಕಾಂಗ್ರೆಸ್ ಪಕ್ಷವನ್ನು ಟೀಕಿಸುವ ಬದಲು ಅಲ್ಪ ಸಂಖ್ಯಾತರನ್ನು ಓಲೈಸಲು ಬಿಜೆಪಿ ನಾಯಕರು ಪೈಪೋಟಿಯಲ್ಲಿದ್ದಾರೆ ಎಂದು ಲೇವಡಿ ಮಾಡಿದರು.

ಎನ್‌ಡಿಎ ಸರಕಾರದ ಅವಧಿಯಲ್ಲಿ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸರಕಾರ ಹಿಂದುತ್ವ ನಿಲುವನ್ನು ತೋರೆಯುತ್ತಿದೆ ಎಂದು ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ಟೀಕಿಸಿದ್ದರು. ಇದೀಗ ಅವರ ಪುತ್ರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಪಕ್ಷ ಕೇವಲ ಅಧಿಕಾರದ ಗದ್ದುಗೆ ಏರಬೇಕು ಎನ್ನುವ ಉದ್ದೇಶದಿಂದ ಹಿಂದುತ್ವ ಮರೆತು ಮುಸ್ಲಿಮರನ್ನು ಓಲೈಸುವಲ್ಲಿ ನಿರತವಾಗಿದೆ ಎಂದು ಶಿವಸೇನೆ ಮುಖ್ಯಸ್ಥ ಉದ್ಭವ್ ಠಾಕ್ರೆ ಕಿಡಿಕಾರಿದ್ದಾರೆ

Share this Story:

Follow Webdunia kannada