Select Your Language

Notifications

webdunia
webdunia
webdunia
webdunia

ನಿರ್ಗಮಿತ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಗೆ ಆತ್ಮೀಯ ಬೀಳ್ಕೊಡುಗೆ

ನಿರ್ಗಮಿತ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಗೆ ಆತ್ಮೀಯ ಬೀಳ್ಕೊಡುಗೆ
ನವದೆಹಲಿ , ಭಾನುವಾರ, 23 ಜುಲೈ 2017 (10:59 IST)
ನವದೆಹಲಿ: ನಿರ್ಗಮಿತ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ  ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿದಾಯ ಆತಿಥ್ಯ ಕೂಟದಲ್ಲಿ ನೆನಪಿನ ಕಾಣಿಕೆಯನ್ನು ನೀಡುವ ಮೂಲಕ ಆತ್ಮೀಯವಾಗಿ ಬೀಳ್ಕೊಟ್ಟರು.
 
ಈ ಸಂದರ್ಭದಲ್ಲಿ ಭೋಜನ ಕೂಟ ಏರ್ಪಡಿಸಲಾಗಿತ್ತು. ಈ ವೇಳೆಯಲ್ಲಿ ನೆನಪಿನ ಕಾಣಿಕೆಯಾಗಿ ಮುಖರ್ಜಿಯವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಭೋಜನ ಕೂಟದಲ್ಲಿ ಚುನಾಯಿತ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಹಿರಿಯ ಸಚಿವರುಗಳು ಮತ್ತು ವಿರೋಧ ಪಕ್ಷದ ನಾಯಕರು ಭಾಗವಹಿಸಿದ್ದರು.
 
ಇದೇ ವೇಳೆ ದೆಹಲಿಯ ಮನೆಕ್ಷಾ ಕೇಂದ್ರದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಷ್ಟ್ರಪತಿ ಮಿಲಿಟರಿಯ ಹಿರಿಯ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದರು. ಇಂದು ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ಎಲ್ಲಾ ಸಂಸದರು ನಿರ್ಗಮಿತ ರಾಷ್ಟ್ರಪತಿ ಮುಖರ್ಜಿಯವರಿಗೆ ವಿದಾಯ ಕೋರಲಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

‘ಅಮೆರಿಕಾ ಮಧ್ಯಸ್ಥಿಕೆ ವಹಿಸಿದರೆ ಕಾಶ್ಮೀರ ಕತೆ ಮುಗಿದೇ ಹೋಯ್ತು’