Webdunia - Bharat's app for daily news and videos

Install App

ಪೋಕ್ರಾನ್ ಅಣು ಪರೀಕ್ಷೆ ಸಂದರ್ಭದಲ್ಲಿ ಸಿಂಗ್ ಇದ್ದಿದ್ರೆ ಓಡಿಹೋಗುತ್ತಿದ್ದರು: ಮೋದಿ

Webdunia
ಶನಿವಾರ, 30 ನವೆಂಬರ್ 2013 (13:03 IST)
PTI
ಜಗತ್ತಿನ ಬಲಿಷ್ಠ ರಾಷ್ಟ್ರಗಳು ನಿರ್ಬಂಧ ಹೇರುವುದಾಗಿ ಎಚ್ಚರಿಸಿದ್ದರೂ ಅಂದಿನ ಪ್ರಧಾನಿ ವಾಜಪೇಯಿ ಯಶಸ್ವಿಯಾಗಿ ಪೋಕ್ರಾನ್ ಅಣು ಪರೀಕ್ಷೆ ನಡೆಸಿದರು. ಇಂದಿನಂತೆ ದುರ್ಬಲ ಪ್ರಧಾನಿಯಾಗಿದ್ದಲ್ಲಿ ಓಡಿ ಹೋಗುತ್ತಿದ್ದರು ಎಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಪ್ರಧಾನಿಗೆ ಲೇವಡಿ ಮಾಡಿದ್ದಾರೆ.

ವಿಶ್ವದ ಪ್ರಬಲ ರಾಷ್ಟ್ರಗಳು ಭಾರತಕ್ಕೆ ನಿರ್ಭಂಧ ಹೇರಿದ್ದವು. ವಿಶ್ವ ಒಂದು ಕಡೆಯಾದರೇ ಭಾರತ ಏಕಾಂಗಿಯಾಗಿತ್ತು. ಆದರೂ ವಾಜಪೇಯಿ ಹೆದರದೆ ಪೋಕ್ರಾನ್ ಅಣು ಪರೀಕ್ಷೆ ನಡೆಸಿಯೇ ತೀರಿದರು ಎಂದು

ರಾಜಸ್ಥಾನದಲ್ಲಿ ವಸುಂಧರಾ ರಾಜೇ ನೇತೃತ್ವದ ಬಿಜೆಪಿ ಪಕ್ಷ ಅಧಿಕಾರದ ಗದ್ದುಗೆಗೆ ಏರಲಿದೆ. ದೆಹಲಿಯಲ್ಲೂ ಬಿಜೆಪಿ ಪಕ್ಷ ಅಧಿಕಾರ ಹಿಡಿಯಲಿದೆ ಎಂದು ಭವಿಷ್ಯ ನುಡಿದರು.

ದೇಶದಲ್ಲಿ ಬಿಜೆಪಿ ಪ್ರಬಲ ಅಲೆಯಿರುವುದರಿಂದ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರ ಹಿಡಿಯುವುದು ತುಂಬಾ ಕಷ್ಟವಾಗಿದೆ ಎಂದರು. ಯುಪಿಎ ಸರಕಾರ ತನ್ನ ಅಧಿಕಾರವಧಿಯಲ್ಲಿ ಅಭಿವೃದ್ಧಿಯನ್ನು ತೊರೆದು ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಕಿಡಿಕಾರಿದರು.

ಕಲ್ಲಿದ್ದಲು ಹಗರಣದ ದಾಖಲೆಗಳು ಕಳೆದುಹೋಗಿವೆ ಎಂದು ಕೇಂದ್ರ ಸರಕಾರ ನಾಚಿಕೆಯಿಲ್ಲದೇ ಹೇಳಿಕೆ ನೀಡುತ್ತದೆ. ದಾಖಲೆಗಳಲ್ಲ ಕೇಂದ್ರ ಸರಕಾರವೇ ಕಳೆದುಹೋಗಿದೆ ಕಾಂಗ್ರೆಸ್ ಪಕ್ಷ ಒಡೆದಾಳುವ ನೀತಿಯನ್ನು ಅನುಸರಿಸುತ್ತಿದೆ. ಬಿಜೆಪಿ ಏಕತೆಗೆ ಹೆಸರುವಾಸಿಯಾಗಿದೆ ಎಂದು ನರೇಂದ್ರ ಮೋದಿ ತಿರುಗೇಟು ನೀಡಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments