Webdunia - Bharat's app for daily news and videos

Install App

ಬಂಧನ: ಮಾಯಾವತಿ ಸರ್ವಾಧಿಕಾರಿ ಎಂದ ಮುಲಾಯಂ ಪುತ್ರ

Webdunia
ಬುಧವಾರ, 9 ಮಾರ್ಚ್ 2011 (15:10 IST)
ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಮಾಯಾವತಿ ರಾಜಕೀಯ ದರ್ಬಾರು ವಿರುದ್ಧ ಬೀದಿ ಬೀದಿಗಳಲ್ಲಿ ಪ್ರತಿಭಟನೆ ಹೆಚ್ಚಾಗಿರುವಂತೆಯೇ, ಅಲ್ಲಿನ ಸರಕಾರವೂ ಪ್ರತಿಪಕ್ಷಗಳನ್ನು ಮಣಿಸಲು ಅಧಿಕಾರವನ್ನು ಸಮರ್ಥವಾಗಿಯೇ ಪ್ರಯೋಗಿಸುತ್ತಿದೆ. ಈ ಸಂಘರ್ಷದ ಮುಂದುವರಿದ ಭಾಗವಾಗಿ ಬುಧವಾರ, ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರ ಪುತ್ರ ಅಖಿಲೇಶ್ ಸಿಂಗ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಇದೇ ವೇಳೆ, ಮಾಯಾವತಿ ಕ್ರಮಕ್ಕೆ ಕೆರಳಿ ಕೆಂಡವಾಗಿರುವ ಅಖಿಲೇಶ್, ರಾಜ್ಯ ಸರಕಾರವು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದು, ನನ್ನ ಬಂಧನವೇ ಇದಕ್ಕೆ ಸಾಕ್ಷಿ ಎಂದು ಅಬ್ಬರಿಸಿದ್ದಾರೆ. ಎಸ್ಪಿಯ ಉತ್ತರ ಪ್ರದೇಶ ಘಟಕದ ಅಧ್ಯಕ್ಷರೂ ಆಗಿರುವ ಅಖಿಲೇಶ್ ಅವರು ದೆಹಲಿಯಿಂದ ವಾಪಸಾಗುತ್ತಿದ್ದಂತೆಯೇ ಅಮೌಸಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಯಿತು.

ರಾಜ್ಯ ಸರಕಾರದ ಸರ್ವಾಧಿಕಾರಿ ಪ್ರವೃತ್ತಿ ವಿರುದ್ಧ ನಾವು ಹೋರಾಟ ಮುಂದುವರಿಸುತ್ತೇವೆ ಎಂದವರು ಘೋಷಿಸಿದ್ದಾರೆ.

ಉತ್ತರ ಪ್ರದೇಶ ಆಡಳಿತಾರೂಢ ಬಹುಜನ ಸಮಾಜ ಪಕ್ಷದ ವಿರುದ್ಧ ಸಮಾಜವಾದಿ ಪಕ್ಷವು ಪ್ರತಿಭಟನೆ ನಡೆಸುತ್ತಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಖಿಲೇಶ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಖಿಲೇಶ್ ಅವರು ಲಖ್ನೋ ಮತ್ತು ತಮ್ಮ ಸಂಸದೀಯ ಕ್ಷೇತ್ರವಾದ ಕನೌಜ್‌ನಲ್ಲಿ ಪಕ್ಷದ ಸಭೆಯಲ್ಲಿ ಮಾತನಾಡುವವರಿದ್ದರು.

" ಬಿಎಸ್‌ಪಿ ಹಠಾವೋ, ಪ್ರದೇಶ್ ಬಚಾವೋ" ಎಂಬ ಮೂರು ದಿನಗಳ ಆಂದೋಲನವನ್ನು ಸಮಾಜವಾದಿ ಪಕ್ಷ (ಎಸ್ಪಿ) ಮಾರ್ಚ್ 7ರಂದು ಆರಂಭಿಸಿತ್ತು. ಸೋಮವಾರ ಮುಲಾಯಂ ಸಿಂಗ್ ಅವರನ್ನೂ ಪೊಲೀಸರು ಬಂಧಿಸಿ ನಂತರ ಬಿಟ್ಟಿದ್ದರು. ಈ ಕ್ರಮವು ಬುಧವಾರ ಸಂಸತ್ತಿನಲ್ಲಿ ಭಾರೀ ಕೋಲಾಹಲಕ್ಕೂ ಕಾರಣವಾಯಿತು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಪ್ರಕರಣದಲ್ಲಿ ತೀವ್ರ ಬೆಳವಣಿಗೆ: ನೇತ್ರಾವತಿ ನದಿ ತಟದಲ್ಲಿ ಎಸ್‌ಐಟಿಯಿಂದ ಸ್ಥಳ ಮಹಜರು

ಸರಕಾರ ನಡೆಸಲು ಬಾರದ ಕಾಂಗ್ರೆಸ್ಸಿಗರು: ಗೋವಿಂದ ಕಾರಜೋಳ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮಪ್ಪನನ್ನು ಹೊಗಳಿದ್ದನ್ನು ಬಿಜೆಪಿ ತಿರುಚಿದೆ, ಹಾಗೆ ಹೇಳಿಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಎಸ್ ಸಿ ಎಸ್ ಟಿ ಹಣ ಗ್ಯಾರಂಟಿಗೆ ಬಳಕೆ: ಹಣವಿಲ್ಲದಿದ್ದರೆ ಗ್ಯಾರಂಟಿ ಯಾಕೆ ಎಂದ ಆರ್ ಅಶೋಕ್

Show comments