Webdunia - Bharat's app for daily news and videos

Install App

ಬಿಜೆಪಿ ಅಭ್ಯರ್ಥಿ ಕಿರಣ್ ಖೇರ್ ಮೇಲೆ ಮೊಟ್ಟೆ, ಕಪ್ಪುಧ್ವಜಗಳನ್ನೆಸೆದ ಬಿಜೆಪಿ ಕಾರ್ಯಕರ್ತರು

Webdunia
ಮಂಗಳವಾರ, 18 ಮಾರ್ಚ್ 2014 (16:18 IST)
ಬಾಲಿವುಡ್ ನಟ ಅನುಪಮ್ ಖೇರ್ ಪತ್ನಿ,ನಟಿ, ಬಿಜೆಪಿ ಅಭ್ಯರ್ಥಿ ಕಿರಣ್ ಖೇರ್ ಇಂದು ಚುನಾವಣಾ ಅಭಿಯಾನವನ್ನು ಆರಂಭಿಸಲು ನಗರಕ್ಕೆ ಆಗಮಿಸುತ್ತಿದ್ದಂತೆ ಪ್ರತಿಭಟನಾಕಾರರು ಕಪ್ಪು ಧ್ವಜಗಳನ್ನು ತೋರಿಸಿ, ತಮ್ಮ ಅಸಮ್ಮತಿಯ ಸಂಜ್ಞೆಯುಳ್ಳ ಘೋಷಣೆಗಳನ್ನು ಕೂಗಿದರಲ್ಲದೇ ಮೊಟ್ಟೆಗಳನ್ನು ಎಸೆದ ಘಟನೆ ವರದಿಯಾಗಿದೆ.
PTI

ಬಿಜೆಪಿ ಕಿರಣ್ ಖೇರ್ ಅವರನ್ನು ಚಂಡೀಗಡ್‌ನ ಅಭ್ಯರ್ಥಿಯನ್ನಾಗಿ ಘೋಷಿಸಿದ ಕಾರಣಕ್ಕೆ ಅತ್ರಪ್ತರಾಗಿರುವ ಪಕ್ಷದ ಕಾರ್ಯಕರ್ತರು ಪಕ್ಷದ ಪ್ರಧಾನ ಕಚೇರಿಗೆ ಅವರು ಆಗಮಿಸಿದ ಸಂದರ್ಭದಲ್ಲಿ "ಕಿರಣ್ ಖೇರ್ ಹಿಂತಿರುಗಿ" ಎಂಬ ಘೋಷಣೆಗಳನ್ನು ಕೂಗಿ ಉದ್ರಿಕ್ತ ವಾತಾವರಣ ಸೃಷ್ಟಿಸಿದರು.

ಚಂಡೀಗಡ್‌ದ ಬಿಜೆಪಿ ಅಧ್ಯಕ್ಷ ಸಂಜಯ್ ಟಂಡನ್, ಮಾಜಿ ಸಂಸದ ಸತ್ಯ ಪಾಲ್ ಜೈನ್ ಮತ್ತು ಮಾಜಿ ಕೇಂದ್ರ ಸಚಿವ ಹರಮೋಹನ್ ಧವನ್‌ ರಂತಹ ಸ್ಥಳೀಯ ನಾಯಕರು ಈ ಕ್ಷೇತ್ರದಿಂದ ಸ್ಪರ್ಧಿಸಲು ಯೋಜಿಸಿದ್ದರು. ಆದರೆ ಬಿಜೆಪಿ ಹೈಕಮಾಂಡ್ ಆ ಕ್ಷೇತ್ರದಲ್ಲಿ ಕಿರಣ್ ಖೇರ್ ಗೆ ಟಿಕೆಟ್ ನೀಡಿದ್ದರಿಂದ ಆಕ್ರೋಶ ಎದುರಾಗಿದೆ. ಪ್ರತಿಭಟನಾಕಾರರಲ್ಲಿ ಹೆಚ್ಚಿನವರು ಧವನ್ ಬೆಂಬಲಿಗರಾಗಿದ್ದರು ಎಂದು ಪಕ್ಷದ ಮೂಲಗಳು ತಿಳಿಸಿವೆ.

ವೆಬ್ದುನಿಯಾವನ್ನು ಓದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments