Webdunia - Bharat's app for daily news and videos

Install App

ಬೆಲೆ ಇಳಿಕೆ ಹೇಳಿಕೆ: ದೇವ್ರಾಗೆ ನೋಟಿಸ್ ಜಾರಿ

Webdunia
ಬುಧವಾರ, 26 ನವೆಂಬರ್ 2008 (19:37 IST)
ವಿಧಾನಸಭಾ ಚುನಾವಣೆಯ ಬಳಿಕ ತೈಲೋತ್ಪನ್ನಗಳ ಬೆಲೆಯನ್ನು ಕಡಿತಗೊಳಿಸಲಾಗುವುದು ಎಂಬ ಹೇಳಿಕೆ ನೀಡಿದ್ದ ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಮುರಳಿ ದೇವ್ರಾಗೆ ಚುನಾವಣಾ ಆಯೋಗ ಬುಧವಾರ ನೋಟಿಸ್ ಜಾರಿ ಮಾಡಿದೆ.

ಆರು ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸದ್ಯ ಪೆಟ್ರೋಲಿಯಂ ದರಗಳನ್ನು ಕಡಿತಗೊಳಿಸುವುದಿಲ್ಲ, ಆದರೆ ಚುನಾವಣೆ ಮುಕ್ತಾಯದ ಬಳಿಕ ತೈಲೋತ್ಪನ್ನಗಳ ಬೆಲೆಯನ್ನು ಇಳಿಸಲಾಗುವುದು ಎಂದು ದೇವ್ರಾ ಅವರು ಮಂಗಳವಾರ ಭರವಸೆ ನೀಡಿದ್ದರು.

ದೇವ್ರಾ ಅವರ ಹೇಳಿಕೆ ವಿರುದ್ಧ ಭಾರತೀಯ ಜನತಾ ಪಕ್ಷದ ನಿಯೋಗ ಬುಧವಾರ ಬೆಳಿಗ್ಗೆ ಚುನಾವಣಾ ಆಯೋಗವನ್ನು ಭೇಟಿಯಾಗಿ, ಕಾಂಗ್ರೆಸ್ ಮೇಲೆ ಕ್ರಮ ಕೈಗೊಳ್ಳುವಂತೆ ಅಗ್ರಹಿಸಿತ್ತು.

ವಿಧಾನಸಭಾ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ದೇವ್ರಾ ತೈಲೋತ್ಪನ್ನ ದರ ಇಳಿಕೆ ಘೋಷಣೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿತ್ತು.

ಪೆಟ್ರೋಲ್ ಬೆಲೆಯಲ್ಲಿ 5ರೂ. ಹಾಗೂ ಅಡುಗೆ ಅನಿಲ ಸಿಲಿಂಡರ್ ಒಂದಕ್ಕೆ 20ರೂ.ಗಳಷ್ಟು ಕಡಿತಗೊಳಿಸುವಂತೆ ಸಲಹೆ ನೀಡಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರವನ್ನು ಕಳುಹಿಸಲಾಗಿದ್ದು, ಏತನ್ಮಧ್ಯೆ ಡಿಸೇಲ್ ಬೆಲೆಯನ್ನು ಇಳಿಸುವ ಪ್ರಸ್ತಾಪ ಸದ್ಯಕ್ಕಿಲ್ಲ ಎಂದು ದೇವ್ರಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು.

ಜಾಗತಿಕವಾಗಿ ತೈಲ ಬೆಲೆ ಬ್ಯಾರೆಲ್‌ವೊಂದಕ್ಕೆ 147ಡಾಲರ್‌ನಿಂದ 50ಡಾಲರ್‌ಗೆ ಇಳಿದಿರುವ ಹಿನ್ನೆಲೆಯಲ್ಲಿ ತೈಲೋತ್ಪನ್ನಗಳ ಬೆಲೆ ಇಳಿಸುವುದಾಗಿ ಅವರು ಹೇಳಿದ್ದರು.

ಆದರೆ ಇದೀಗ ಆರು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು, ದೇವ್ರಾ ಅವರ ಹೇಳಿಕೆ ಚುನಾವಣಾ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದಂತಾಗಿದ್ದು, ಈ ಬಗ್ಗೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿತ್ತು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments