ಭಯೋತ್ಪಾದನೆ ಹೆಸರಲ್ಲಿ ಅಮಾಯಕ ಮುಸ್ಲಿಂ ಯುವಕರನ್ನು ಬಂಧಿಸದಂತೆ ದೇಶದ ಎಲ್ಲಾ ಮುಖ್ಯಮಂತ್ರಿಗಳಿಗೆ ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಕೋರಿದ್ದಾರೆ.
ತನಿಖಾ ದಳದ ಅಧಿಕಾರಿಗಳು ಭಯೋತ್ಪಾದನೆ ಹೆಸರಲ್ಲಿ ಅಮಾಯಕ ಮುಸ್ಲಿಂ ಯುವಕರಿಗೆ ಕಿರುಕುಳ ನೀಡಲಾಗುತ್ತಿದೆ ಎನ್ನುವ ಬಗ್ಗೆ ದೇಶದ ವಿವಿಧ ರಾಜ್ಯಗಳಿಂದ ಕೇಂದ್ರ ಸರಕಾರಕ್ಕೆ ವರದಿಗಳು ಬರುತ್ತಿವೆ ಎಂದು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಕೆಲ ಅಲ್ಪಸಂಖ್ಯಾತ ಯುವಕರು ತಮ್ಮನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿ ಹಕ್ಕುಗಳ ದಮನ ಮಾಡಲಾಗುತ್ತಿದೆ ಎನ್ನುವ ಭಾವನೆಗಳು ಬೆಳೆಯುತ್ತಿವೆ ಎಂದು ಹೇಳಿದ್ದಾರೆ.
ಕೇಂದ್ರ ಸರಕಾರ ಯಾವುದೇ ರೀತಿಯ ಭಯೋತ್ಪಾದನೆಯನ್ನು ತಡೆಯಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ಬದ್ಧವಾಗಿದೆ. ಆದರೆ, ಅಮಾಯಕರು ಬಂಧನೆಯ ಕಿರುಕುಳಕ್ಕೆ ಒಳಗಾಗುವುದು ಬೇಡ ಎಂದು ತಿಳಿಸಿದ್ದಾರೆ.