Webdunia - Bharat's app for daily news and videos

Install App

ಭಾರತೀಯ ಮುಸ್ಲಿಮರ ಬಗ್ಗೆ ದ್ವೇಷವಿಲ್ಲ: ಬಾಳ್ ಠಾಕ್ರೆ

Webdunia
ಬುಧವಾರ, 23 ಮಾರ್ಚ್ 2011 (09:12 IST)
PTI
ಭಾರತೀಯ ಮುಸ್ಲಿಮರ ಬಗ್ಗೆ ನನಗೆ ಯಾವುದೇ ರೀತಿಯ ದ್ವೇಷವಿಲ್ಲ ಎಂದು ಹೇಳಿರುವ ಶಿವಸೇನೆ ವರಿಷ್ಠ ಬಾಳ್ ಠಾಕ್ರೆ, ವಿದೇಶಗಳಿಂದ ಬಂದು ಇಲ್ಲಿ ಸಮಸ್ಯೆಗಳನ್ನು ಸೃಷ್ಟಿಸುವ ಮುಸ್ಲಿಮರ ಬಗ್ಗೆ ಮಾತ್ರ ನನಗೆ ಕೋಪವಿದೆ ಎಂದು ಹೇಳಿದ್ದಾರೆ.

ನನಗೆ ಭಾರತದ ಮುಸ್ಲಿಮರ ವಿರುದ್ಧ ಯಾವುದೇ ದೂರು, ವಿರೋಧ ಅಥವಾ ದ್ವೇಷವಿಲ್ಲ ಎಂದು ಶಿವಸೇನೆ ಮುಖವಾಣಿ 'ಸಾಮ್ನಾ'ದಲ್ಲಿ ಪ್ರಕಟವಾಗಿರುವ ಎರಡನೇ ಭಾಗದ ಸಂದರ್ಶನದಲ್ಲಿ ಠಾಕ್ರೆ ಒತ್ತಿ ಹೇಳಿದ್ದಾರೆ.

ಅವರ ಕೋಪ ಇರುವುದು ದೇಶದ ಹೊರಗಿನಿಂದ ಬಂದು ಇಲ್ಲಿ ಸಮಸ್ಯೆ ಸೃಷ್ಟಿಸುತ್ತಿರುವವರ ವಿರುದ್ಧ ಮಾತ್ರ.

ಕಳೆದ ಹಲವಾರು ತಲೆಮಾರುಗಳಿಂದ ಇಲ್ಲೇ ಬದುಕುತ್ತಿರುವ ಮುಸ್ಲಿಮರ ವಿರುದ್ಧ ನನಗೆ ಯಾವುದೇ ರೀತಿಯ ದ್ವೇಷ ಅಥವಾ ವಿರೋಧಗಳಿಲ್ಲ. ಆದರೆ ಹೊರದೇಶಗಳಿಂದ ನಮ್ಮ ದೇಶಕ್ಕೆ ನುಸುಳಿರುವವರ ಬಗ್ಗೆ ಆಕ್ಷೇಪಗಳಿವೆ. ಅವರನ್ನು ಹಿಡಿದು ಗಲ್ಲಿಗೇರಿಸಬೇಕು ಇಲ್ಲವೇ ಹೊರಗೆ ಹಾಕಬೇಕು ಎಂದು ನುಡಿದರು.

ಅವರ ಪ್ರಕಾರ ಈ ರೀತಿಯಾಗಿ ವಿದೇಶಗಳಿಂದ ನುಸುಳುತ್ತಿರುವ ಮುಸ್ಲಿಮರು ಪಾಕಿಸ್ತಾನ ಮತ್ತು ಬಾಂಗ್ಲಾದೇಶದವರು.

ಅವರು ಹೊರ ದೇಶದಿಂದ ನಮ್ಮ ದೇಶಕ್ಕೆ ಬಂದು ನಮ್ಮ ಮುಸ್ಲಿಮರನ್ನು ಪ್ರಚೋದಿಸುತ್ತಾರೆ. ಕೊಂಕಣ ಪ್ರದೇಶದಲ್ಲಿ (ಮಹಾರಾಷ್ಟ್ರ ಕರಾವಳಿ) ಹೊರಗಿನಿಂದ ಒಳ ನುಸುಳಿರುವ ತೀವ್ರವಾದಿ ಶಕ್ತಿಗಳು ನಮ್ಮ ಕೊಂಕಣಿ ಮುಸ್ಲಿಮರನ್ನು ಬಡಿದೆಬ್ಬಿಸುತ್ತಿದ್ದಾರೆ ಮತ್ತು ಅವರನ್ನು ಹಾಳು ಮಾಡುತ್ತಿದ್ದಾರೆ. ಈ ರೀತಿಯಾಗಿ ಹೊರಗಿನಿಂದ ಬಂದ ಮುಸ್ಲಿಮರಿಗೆ ಸಹಾಯ ಮಾಡುವ ಮುಸ್ಲಿಮರನ್ನು ಕೂಡ ಸಮಾನ ತಪ್ಪಿತಸ್ಥರು ಎಂದು ಪರಿಗಣಿಸಬೇಕು ಎಂದು ಸಂದರ್ಶನದಲ್ಲಿ ಒತ್ತಾಯಿಸಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

Show comments