Select Your Language

Notifications

webdunia
webdunia
webdunia
webdunia

ಭ್ರಷ್ಟ ಅಧಿಕಾರಿಗಳನ್ನು ಕಿತ್ತೊಗೆಯಲು ಬಿಹಾರ್ ಸಿಎಂ ನಿತೀಶ್ ಕುಮಾರ್ ಆದೇಶ

ಭ್ರಷ್ಟ ಅಧಿಕಾರಿಗಳನ್ನು ಕಿತ್ತೊಗೆಯಲು ಬಿಹಾರ್ ಸಿಎಂ ನಿತೀಶ್ ಕುಮಾರ್ ಆದೇಶ
ಪಾಟ್ನಾ , ಗುರುವಾರ, 16 ಜನವರಿ 2014 (16:01 IST)
PTI
ಮುಂಬರುವ ಎರಡು ತಿಂಗಳೊಳಗಾಗಿ ಭ್ರಷ್ಟ ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸುವಂತೆ ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಅದೇಶ ನೀಡಿದ್ದು, ಭ್ರಷ್ಟ ಅಧಿಕಾರಿಗಳಿಗೆ ಕಠಿಣ ಸಂದೇಶ ರವಾನಿಸಲು ಸಿದ್ದವಾಗಿದ್ದಾರೆ.

ಇಲಾಖೆಯ ನಿಯಮಾವಳಿಗಳನ್ನು ಎರಡು ತಿಂಗಳೊಳಗಾಗಿ ಪೂರ್ತಿಗೊಳಿಸಿ ಭ್ರಷ್ಟ ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸುವಂತೆ ಮುಖ್ಯಮಂತ್ರಿಗಳು ಆದೇಶ ನೀಡಿದ್ದಾರೆ ಎಂದು ಮುಖ್ಯಕಾರ್ಯದರ್ಶಿ ಎ.ಕೆ.ಸಿನ್ಹಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್, ಜಿಲ್ಲಾ ನ್ಯಾಯಾಧೀಶರ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಭೆಯನ್ನು ಕರೆದು, ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿರುವ ಸರಕಾರಿ ನೌಕರರ ಪ್ರಕರಣಗಳನ್ನು ಶೀಘ್ರದಲ್ಲಿ ವಿಚಾರಣೆ ನಡೆಸಿ ಮುಕ್ತಗೊಳಿಸುವಂತೆ ಕೋರಿದ್ದಾರೆ.

Share this Story:

Follow Webdunia kannada