ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

Sampriya
ಗುರುವಾರ, 30 ಅಕ್ಟೋಬರ್ 2025 (18:42 IST)
Photo Credit X
ನವದೆಹಲಿ: ರೋಹಿತ್ ಆರ್ಯ ಎಂದು ಗುರುತಿಸಲಾದ ವ್ಯಕ್ತಿಯೊಬ್ಬರು ಫ್ಲಾಟ್‌ನಲ್ಲಿ 17 ಮಕ್ಕಳು, ಹಿರಿಯ ನಾಗರಿಕರು ಮತ್ತು ಒಬ್ಬ ಅಪರಿಚಿತ ವ್ಯಕ್ತಿ ಸೇರಿದಂತೆ 19 ಜನರನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರೋಪಿ ಗುಂಡೇಟಿಗೆ ಬಲಿಯಾದ ಘಟನೆ ನಡೆದಿದೆ.

ಪೊಲೀಸ್ ಕ್ರಾಸ್‌ಫೈರ್‌ನಲ್ಲಿ ಎದೆಗೆ ಗಾಯಗೊಂಡು ನಂತರ ಆರೋಪಿ ಆರ್ಯ ಸಾವನ್ನಪ್ಪಿದ್ದಾನೆ. ಇನ್ನೂ ಈ ಸಂದರ್ಭದಲ್ಲಿ ಹಿರಿಯ ನಾಗರಿಕರೂ ಗಾಯಗೊಂಡಿದ್ದಾರೆ ಮತ್ತು ವರದಿಗಳ ಪ್ರಕಾರ ಚಿಕಿತ್ಸೆಗಾಗಿ ಬಾಳಾಸಾಹೇಬ್ ಠಾಕ್ರೆ ಟ್ರಾಮಾ ಆಸ್ಪತ್ರೆಗೆ ಸಾಗಿಸಲಾಯಿತು. 

ಹಿರಿಯ ಅಧಿಕಾರಿಗಳು ಮತ್ತು ಕ್ವಿಕ್ ರೆಸ್ಪಾನ್ಸ್ ಘಟಕ ಸೇರಿದಂತೆ ಮುಂಬೈ ಪೊಲೀಸ್ ತಂಡಗಳು ಬಿಕ್ಕಟ್ಟಿನ ಬಗ್ಗೆ ಮಾಹಿತಿ ಪಡೆದ ನಂತರ ಸ್ಥಳಕ್ಕೆ ಧಾವಿಸಿವೆ. ಎಲ್ಲಾ ಮಕ್ಕಳನ್ನು ಸ್ಥಳದಿಂದ ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಗುರುವಾರ ಮುಂಬೈನ ಪೊವೈನಲ್ಲಿರುವ ಆರ್‌ಎ ಸ್ಟುಡಿಯೋಗೆ  ಆಡಿಷನ್‌ಗಾಗಿ ಮಕ್ಕಳನ್ನ ಕರೆಯಲಾಗಿತ್ತು. ಅಲ್ಲಿಂದಲೇ ಮಕ್ಕಳನ್ನ ಅಪಹರಿಸಲಾಗಿತ್ತು. ತಾನು 17 ಮಕ್ಕಳನ್ನು ಒತ್ತೆಯಾಳುಗಳಾಗಿ ಇಟ್ಟುಕೊಂಡಿರುವ ಬಗ್ಗೆ ರೋಹಿತ್‌ ಆರ್ಯ ವಿಡಿಯೋ ಸಂದೇಶವೊಂದನ್ನ ಹರಿಬಿಟ್ಟಿದ್ದ. 

ಪೋಲೀಸ್ ಇನ್ಸ್‌ಪೆಕ್ಟರ್ ಬಲವಂತವಾಗಿ ಸ್ಟುಡಿಯೊಗೆ ಪ್ರವೇಶಿಸಿದ ನಂತರ ಮತ್ತು ಆರ್ಯ ಅವರ ಬಳಿಯಿದ್ದ ಏರ್‌ಗನ್ ಮತ್ತು ಕೆಲವು ರಾಸಾಯನಿಕಗಳನ್ನು ವಶಪಡಿಸಿಕೊಂಡ ನಂತರ ಬಿಕ್ಕಟ್ಟು ಕೊನೆಗೊಂಡಿತು ಎಂದು ಪೊವೈ ಪೊಲೀಸರು ತಿಳಿಸಿದ್ದಾರೆ. 

ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್‌ ಆಗ್ತಿದ್ದಂತೆ ಎಚ್ಚೆತ್ತ ಪೊಲೀಸರು ಆತನಿರುವ ಕಟ್ಟಡ ಪತ್ತೆ ಹಚ್ಚಿ, ಮಕ್ಕಳನ್ನು ರಕ್ಷಿಸಿದ್ರು. ಈ ವೇಳೆ ಪೊಲೀಸರು ಗುಂಡು ಹಾರಿಸಿದ್ದು ಆರ್ಯನಿಗೆ ತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments