Webdunia - Bharat's app for daily news and videos

Install App

ಮುಂಬೈ ದಾಳಿ ತನಿಖೆ: ಪಾಕ್ ತಂಡಕ್ಕೆ ಭಾರತ ಅನುಮತಿ

Webdunia
ಬುಧವಾರ, 2 ಮಾರ್ಚ್ 2011 (09:25 IST)
26 /11ರ ಮುಂಬೈ ದಾಳಿಗೆ ಸಂಬಂಧಿಸಿದಂತೆ ವಿಚಾರಣೆಗಾಗಿ ಪಾಕಿಸ್ತಾನದಿಂದ ಬರುವ ತನಿಖಾ ತಂಡಕ್ಕೆ ಅವಕಾಶ ನೀಡಲಾಗುತ್ತದೆ. ಆದರೆ ಅದಕ್ಕೆ ಮೊದಲು, ದಾಳಿಗೆ ಸಂಬಂಧಿಸಿ ಕೆಲವು ಶಂಕಿತರ ವಿಚಾರಣೆಗಾಗಿ ಭಾರತೀಯ ತಂಡವನ್ನು ಅಲ್ಲಿಗೆ ಕಳುಹಿಸುವ ನಮ್ಮ ಕೋರಿಕೆಗೆ ಸಂಬಂಧಿಸಿ ಪಾಕಿಸ್ತಾನದಿಂದ ಉತ್ತರವನ್ನು ಕಾಯುತ್ತಿದ್ದೇವೆ ಎಂದು ಗೃಹ ಸಚಿವ ಪಿ.ಚಿದಂಬರಂ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಮುಂಬೈ ನರಮೇಧದಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಲಾಗಿರುವ ಕೆಲವರನ್ನು ಪ್ರಶ್ನಿಸಲು ಭಾರತದ ತಂಡಕ್ಕೆ ಅನುಮತಿ ನೀಡುವಂತೆ ಪಾಕಿಸ್ತಾನವನ್ನು ಕೋರಿದ್ದೇವೆ ಎಂದರು.

ಇದಕ್ಕಾಗಿ ಉತ್ತರ ನಿರೀಕ್ಷಿಸುತ್ತಿದ್ದು, ಪಾಕಿಸ್ತಾನವು ಕೇಳುತ್ತಿರುವ ದಾಖಲೆಗಳನ್ನು ಕೆಲವೇ ದಿನಗಳಲ್ಲಿ ಅದಕ್ಕೆ ಒದಗಿಸುವುದಾಗಿ ತಿಳಿಸಿದ ಗೃಹ ಸಚಿವರು, ಪಾಕಿಸ್ತಾನವು ಕಳುಹಿಸುತ್ತಿರುವ ತನಿಖಾ ತಂಡಕ್ಕೆ ಭಾರತವು ಈಗಾಗಲೇ ತಾತ್ವಿಕ ಒಪ್ಪಿಗೆ ನೀಡಲಾಗಿದೆ ಎಂದರು.

ಹೇಳಿಕೆಗಳನ್ನು ದಾಖಲಿಸಿಕೊಂಡ ತನಿಖಾಧಿಕಾರಿ, ಮ್ಯಾಜಿಸ್ಟ್ರೇಟರು ಹಾಗೂ ಪೋಸ್ಟ್ ಮಾರ್ಟಂ ಮಾಡಿದ ಕೆಲವು ವೈದ್ಯರು ನೀಡುವ ಸಾಕ್ಷ್ಯಾಧಾರಗಳನ್ನು ದಾಖಲಿಸಿಕೊಳ್ಳಲು ನಾವು ಈಗಾಗಲೇ ಪಾಕಿಸ್ತಾನದ ಆಯೋಗಕ್ಕೆ ಒಪ್ಪಿಗೆ ಸೂಚಿಸಿದ್ದೇವೆ. ಅವರಿಂದ ನಮ್ಮ ಪ್ರಶ್ನೆಗೆ ಉತ್ತರದ ನಿರೀಕ್ಷೆಯಲ್ಲಿದ್ದೇವೆ ಎಂದು ಚಿದಂಬರಂ ಹೇಳಿದರು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

Show comments