Webdunia - Bharat's app for daily news and videos

Install App

ಮುಜಾಫರ್‌ ಗಲಭೆ: ಬಿಜೆಪಿ ಶಾಸಕ ಸುರೇಶ್ ರಾಣಾ ಬಂಧನ

Webdunia
ಶುಕ್ರವಾರ, 20 ಸೆಪ್ಟಂಬರ್ 2013 (19:53 IST)
PTI
ಉತ್ತರ ಪ್ರದೇಶದ ಮುಜಾಫರ್‌ನಗರದ ಕೋಮುಗಲಭೆಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸುರೇಶ್ ರಾಣಾ ಅವರನ್ನು ಶುಕ್ರವಾರ ಲಖನೌ ಪೊಲೀಸರು ಬಂಧಿಸಿದ್ದಾರೆ.

ಮುಜಾಫರ್‌ನಗರ ಕೋಮುಗಲಭೆ ಸಂದರ್ಭದಲ್ಲಿ ದ್ವೇಷಪೂರಿತ ಭಾಷಣ ಮಾಡಿರುವ ಆರೋಪದ ಮೇಲೆ ರಾಣಾ ಅವರನ್ನು ಅವರ ನಿವಾಸದಲ್ಲಿ ಪೊಲೀಸರು ಬಂಧಿಸಲಾಯಿತು.

ರಾಣಾ ಅವರು ಗಲಭೆಗೆ ಸಂಬಂಧಿಸಿದಂತೆ ಬಂಧನಕೊಳ್ಳಗಾಗಿರುವ ಮೊದಲ ರಾಜಕಾರಣಿಯಾಗಿದ್ದಾರೆ. ಇನ್ನುಳಿದಂತೆ ರಾಜಕಾರಣಿಗಳಾದ ಖಾಧಿರ್ ರಾಣಾ, ಜಮೀಲ್ ಅಹಮದ್, ನೂರ್ ಸಲೀಂ ರಾಣಾ, ಮಾಜಿ ಸಂಸದ ಶೀಬುಜಾಮನ್, ಹುಕುಂ ಸಿಂಗ್, ಸಂಗತ್ ಸಿಂಗ್ ಸೋಮ್ ವಿರುದ್ಧ ವಾರೆಂಟ್ ಜಾರಿಯಾಗಿದ್ದು, ಅವರು ಸಹ ಬಂಧನದ ಭೀತಿ ಎದುರಿಸುತ್ತಿದ್ದಾರೆ.

ಮುಜಾಫರ್‌ನಗರ ಗಲಭೆ ಸಂದರ್ಭದಲ್ಲಿ ಸಭೆ ಸಮಾರಂಭಗಳನ್ನು ಮಾಡಬಾರದೆಂಬ ನಿಷೇಧಾಜ್ಞೆ ಜಾರಿಯಲ್ಲಿದ್ದರೂ, ಅದನ್ನು ಉಲ್ಲಂಘಿಸಿ ಪ್ರಚೋದನಾಕಾರಿ ಭಾಷಣಗಳನ್ನು ಮಾಡಿದ ಆರೋಪದ ಮೇಲೆ ಕೋರ್ಟ್ ಕಳೆದ ಬುಧವಾರ ಸುರೇಶ್ ರಾಣಾ ಸೇರಿದಂತೆ 6 ರಾಜಕಾರಣಿಗಳ ವಿರುದ್ಧ ವಾರೆಂಟ್ ಜಾರಿಮಾಡಿತ್ತು. ಕೋರ್ಟ್ ಆದೇಶದ ಮೇರೆಗೆ ಪೊಲೀಸರು ರಾಣಾ ಅವರನ್ನು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ.

ಕೋಮುಗಲಭೆಯಿಂದಾಗಿ 50 ಮಂದಿಯ ಸಾವಿಗೆ ಕಾರಣವಾದ ಮುಜಾಫರ್‌ನಗರ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಸಹ ತನ್ನ ಅಸಮಾಧಾನ ವ್ಯಕ್ತಪಡಿಸಿತ್ತು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments