Webdunia - Bharat's app for daily news and videos

Install App

ಮುಲಾಯಂ ಬಂಧನ: ಗದ್ದಲದಿಂದಾಗಿ ಸಂಸತ್ತು ಮುಂದೂಡಿಕೆ

Webdunia
ಸೋಮವಾರ, 7 ಮಾರ್ಚ್ 2011 (15:32 IST)
PTI
ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಹಾಗೂ ಅವರ ಪುತ್ರ ಅಖಿಲೇಶ್ ಅವರಿಗೆ ಗೃಹ ಬಂಧನದಲ್ಲಿಟ್ಟಿರುವ ಮಾಯಾವತಿ ಸರಕಾರದ ಕ್ರಮವನ್ನು ವಿರೋಧಿಸಿ, ಸಮಾಜವಾದಿ ಪಕ್ಷದ ಸಂಸದರ ಕೋಲಾಹಲದಿಂದಾಗಿ ಸಂಸತ್ತನ್ನು ಮುಂದೂಡಲಾಗಿದೆ.

ಆದರೆ, ಮಾಯಾವತಿ ಸರಕಾರದ ಅಧಿಕಾರಿಗಳು ಆರೋಪಗಳನ್ನು ತಳ್ಳಿಹಾಕಿದ್ದು, ಉಭಯ ನಾಯಕರನ್ನು ಗೃಹ ಬಂಧನದಲ್ಲಿರಿಸಿಲ್ಲ ಎಂದು ಸ್ಪಷ್ಟನೆ ನೀಡಿದೆ.

ಶುಕ್ರವಾರದಂದು ನಿಧನ ಹೊಂದಿದ ಕಾಂಗ್ರೆಸ್ ನಾಯಕ ಅರ್ಜುನ್ ಸಿಂಗ್ ಅವರಿಗೆ ಶೃದ್ಧಾಂಜಲಿ ಸಲ್ಲಿಸಿದ ನಂತರ ಸಂಸತನಲ್ಲಿ ಕೋಲಾಹಲ ಸೃಷ್ಟಿಸಿ, ಕಾನೂನು ಅವ್ಯವಸ್ಥೆಯ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರಕಾರವನ್ನು ವಜಾಗೊಳಿಸಬೇಕು ಎಂದು ಪ್ರಧಾನಿಯವರನ್ನು ಒತ್ತಾಯಿಸಿದರು.

ಸಮಾಜವಾದಿ ಪಕ್ಷದ ಸದಸ್ಯರ ಗದ್ದಲದಿಂದಾಗಿ, ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ತಮ್ಮ ಮೂಲ ಸ್ಥಾನಗಳಿಗೆ ತೆರಳುವಂತೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗದಿರುವುದರಿಂದ, ಅನಿವಾರ್ಯವಾಗಿ 15 ನಿಮಿಷಗಳ ಕಾಲ ಸದನವನ್ನು ಮುಂದೂಡಿದರು.

ಸಂಸತ್ತಿನಲ್ಲಿ ಮತ್ತೆ ಕಲಾಪ ಆರಂಭವಾದ ಹಿನ್ನೆಲೆಯಲ್ಲಿ, ಸಮಾಜವಾದಿ ಪಕ್ಷದ ಸದಸ್ಯ ರಿಯೋಟಿ ರಮಣ್ ಸಿಂಗ್ ಅವರಿಗೆ ಮಾತನಾಡಲು ಅವಕಾಶ ನೀಡಿದರು.

ಸಿಂಗ್ ಮಾತನಾಡಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್, ಸಂಸದರು ಮತ್ತು ಕಾರ್ಯಕರ್ತರನ್ನು ಗೃಹಬಂಧನದಲ್ಲಿರಿಸಲಾಗಿದೆ ಎಂದು ಆರೋಪಿಸಿದರು.

ಸದನದ ನಾಯಕರಾದ ಪ್ರಣಬ್ ಮುಖರ್ಜಿ, ಗೃಹ ಸಚಿವಾಲಯಕ್ಕೆ ಮನವಿ ಮಾಡಿ, ಮುಲಾಯಂ ಗೃಹ ಬಂಧನ ಕುರಿತಂತೆ ಸತ್ಯಾಂಶಗಳನ್ನು ಸಂಸತ್ತಿಗೆ ವರದಿ ಮಾಡುವಂತೆ ಕೋರಿದರು.

ಏತನ್ಮಧ್ಯೆ, ಮುಖರ್ಜಿ ಹೇಳಿಕೆಯಿಂದ ತೃಪ್ತರಾಗದ ಸಮಾಜವಾದಿ ಪಕ್ಷದ ಸದಸ್ಯರು, ಮತ್ತೊಮ್ಮೆ ಸದನದಲ್ಲಿ ಕೋಲಾಹಲ ಸೃಷ್ಟಿಸಿದ್ದರಿಂದ ಸದನವನ್ನು ಮುಂದೂಡಲಾಯಿತು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ರಾಹುಲ್ ಗಾಂಧಿಯ ಚುನಾವಣಾ ಅಕ್ರಮ ಪ್ರತಿಭಟನೆ ಕಪಟ ನಾಟಕ: ಬಿವೈ ವಿಜಯೇಂದ್ರ

Show comments