Webdunia - Bharat's app for daily news and videos

Install App

ಮುಲಾಯಂ ರೇಪಿಸ್ಟ್‌ಗಳ ಬಗ್ಗೆ ಮೃದು ಧೋರಣೆ ಹೊಂದಿದ್ದಾರೆ : ಮೋದಿ ಲೇವಡಿ

Webdunia
ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ವಿರುದ್ಧ ಹರಿಹಾಯ್ದಿರುವ ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಸಾಮಾನ್ಯವಾಗಿ ಎಲ್ಲರೂ ಅತ್ಯಾಚಾರಿಗಳ ವಿರುದ್ಧ ಕಠಿಣ ನಿಲುವನ್ನು ಹೊಂದಿದ್ದರೆ, ಮುಲಾಯಂ ಸಿಂಗ್, ಮೃದುತ್ವವನ್ನು ಹೊಂದಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
PTI

ಪ್ರಚಾರ ಒಂದರಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದ ಮೋದಿ "ನಾವು ರೇಪಿಸ್ಟ್‌ಗಳ ಬಗ್ಗೆ ಕಾಠಿಣ್ಯತೆಯನ್ನು ಹೊಂದಿರಬೇಕು. ಆದರೆ ಮುಲಾಯಂ ಸಿಂಗ್ ಬಹಳ ಮೃದು ಧೋರಣೆ ಹೊಂದಿದ್ದಾರೆ" ಎಂದು ಹೇಳಿದರು.

ಕಳೆದ ವಾರ ಸಭೆಯೊಂದರಲ್ಲಿ ಮಾತನಾಡುತ್ತ ಸಿಂಗ್ 'ಗಂಡು ಮಕ್ಕಳು ತಪ್ಪು ಮಾಡುತ್ತಾರೆ. ಆದರೆ ಅವರು ಅತ್ಯಾಚಾರ ಮಾಡಿದರೆ ಗಲ್ಲಿಗೇರಿಸುವುದು ಸರಿಯಲ್ಲ' ಎಂದು ಹೇಳಿದ್ದರು. ಈ ಹೇಳಿಕೆಗೆ ದೇಶಾದ್ಯಂತ ಖಂಡನೆ ವ್ಯಕ್ತವಾಗಿತ್ತು.

ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಮತ್ತು ಎಸ್ಪಿ ಮೇಲೆ ದಾಳಿ ನಡೆಸಿರುವ , ಮೋದಿ " ಈ ಪಕ್ಷಗಳ ನಾಯಕರು, ಆನೆ ಉದ್ಯಾನಗಳನ್ನು ನಿರ್ಮಿಸುತ್ತಿದ್ದಾರೆ, ಸಿಂಹದ ಮೇಲೆ ಸಫಾರಿ ಮಾಡುತ್ತಿದ್ದಾರೆ. ಆದರೆ ಜನರಿಗಾಗಿ ಅವರಿಗೆ ಸಮಯ ಇಲ್ಲ " ಎಂದು ಮೂದಲಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments