Webdunia - Bharat's app for daily news and videos

Install App

ಮೂತ್ರ ವಿಸರ್ಜನೆ ಹೇಳಿಕೆ ನೀಡಿದ್ದ ಪವಾರ್ ಕ್ಷಮೆ ಯಾಚನೆ

Webdunia
ಮಂಗಳವಾರ, 9 ಏಪ್ರಿಲ್ 2013 (11:36 IST)
PR
PR
ರಾಜ್ಯದ ಜನರನ್ನು ಕಾಡುತ್ತಿರುವ ಬರ ಪರಿಸ್ಥಿತಿ ಮತ್ತು ವಿದ್ಯುತ್ ಸಮಸ್ಯೆ ಕುರಿತು ಕೀಳು ಅಭಿರುಚಿಯ ವಿವಾದಾತ್ಮಕ ಹೇಳಿಕೆ ನೀಡಿ ಪ್ರತಿಪಕ್ಷಗಳ ತೀವ್ರ ಟೀಕೆಗೆ ಗುರಿಯಾಗಿರುವ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್, ಸೋಮವಾರ ರಾಜ್ಯದ ಉಭಯ ಸದನಗಳಲ್ಲಿ ಕ್ಷಮೆಯಾಚಿಸಿದರು.

ಪುಣೆ ಬಳಿಯ ಇಂದಾಪುರದಲ್ಲಿ ಶನಿವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಅಣೆಕಟ್ಟೆಯಲ್ಲಿ ನೀರಿಲ್ಲದಿದ್ದರೆ ನಾವೇನು ಅಲ್ಲಿ ಹೋಗಿ ಮೂತ್ರ ವಿಸರ್ಜನೆ ಮಾಡಬೇಕೆ ಎಂಬ ಎನ್‌ಸಿಪಿ ನಾಯಕರೂ ಆದ ಅಜಿತ್ ಅವರ ವಿವಾದಾತ್ಮಕ ಹೇಳಿಕೆಯನ್ನು ಪ್ರತಿಪಕ್ಷಗಳು ಅಸ್ತ್ರವಾಗಿ ಬಳಸಿಕೊಂಡ ಹಿನ್ನೆಲೆಯಲ್ಲಿ ಅವರು ವೈಯಕ್ತಿಕವಾಗಿ ಸದನದ ಕ್ಷಮೆ ಯಾಚಿಸಿದರು.

ಬರ ಪೀಡಿತ ಜನರನ್ನು ಗುರಿಯಾಗಿರಿಸಿ ನಾನು ಹೇಳಿಕೆ ನೀಡಲಿಲ್ಲ, ರೈತರ ಭಾವನೆಗಳಿಗೆ ನೋವುಂಟು ಮಾಡುವ ಉದ್ದೇಶವೂ ನನಗಿರಲಿಲ್ಲ. ಮಾತ್ರವಲ್ಲ, ನನ್ನ ಹೇಳಿಕೆಯು ಬರ ಪರಿಹಾರ ಕಾರ್ಯಾಚರಣೆಗಳ ಮೇಲೆ ಯಾವುದೇ ಪರಿಣಾಮ ಬೀರದೆಂಬ ಭರವಸೆ ಹೊಂದಿದ್ದೇನೆ. ಜೊತೆಗೆ ಪದಗಳನ್ನು ಬಹಳ ಜಾಗರೂಕತೆಯಿಂದ ಬಳಸಬೇಕಿತ್ತು ಎಂದು ತಿಳಿಸಿದರು.

ಶರದ್ ಕ್ಷಮೆ: ತಮ್ಮ ಪಕ್ಷದವರೇ ಆದ ಸಹೋದರನ ಪುತ್ರ ಅಜಿತ್ ಪವಾರ್ ಅವರ ಹೇಳಿಕೆ ಅನಗತ್ಯದ್ದಾಗಿದ್ದು, ಅದಕ್ಕಾಗಿ ಕ್ಷಮೆ ಯಾಚಿಸುವುದಾಗಿ ಕೇಂದ್ರ ಕೃಷಿ ಸಚಿವ ಮತ್ತು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಟ್ವೀಟ್ ಮಾಡಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments