Webdunia - Bharat's app for daily news and videos

Install App

ಯಡಿಯೂರಪ್ಪ ಸಭೆಗೆ ಬಿಜೆಪಿ ಸಂಸದರ ಸಾಮೂಹಿಕ ಚಕ್ಕರ್

Webdunia
ಮಂಗಳವಾರ, 22 ಮಾರ್ಚ್ 2011 (18:37 IST)
ಕರ್ನಾಟಕದ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದೆಹಲಿಯಲ್ಲಿ ಕರೆದಿದ್ದ ಸಭೆಗೆ ರಾಜ್ಯದ ಬಹುತೇಕ ಬಿಜೆಪಿ ಸಂಸದರು ಚಕ್ಕರ್ ಹಾಕಿರುವ ಕುತೂಹಲಕಾರಿ ಬೆಳವಣಿಗೆ ನಡೆದಿದೆ.

ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಮುಖ್ಯಮಂತ್ರಿ ಕರೆದಿದ್ದ ಸಭೆಗೆ ರಾಜ್ಯದ 19 ಬಿಜೆಪಿ ಸಂಸದರಲ್ಲಿ ಕೇವಲ ಎಂಟು ಸಂಸದರು ಮಾತ್ರ ಬಂದಿದ್ದರು. ಅನಂತ್ ಕುಮಾರ್ ಸೇರಿದಂತೆ ಉಳಿದ 11 ಮಂದಿ ನಾಪತ್ತೆಯಾಗಿದ್ದರು.

ಡಿ.ಬಿ. ಚಂದ್ರೇಗೌಡ, ಪಿ.ಸಿ. ಮೋಹನ್, ಜಿ.ಎಸ್. ಬಸವರಾಜು, ಶಿವರಾಮಗೌಡ, ಬಿ.ಎಸ್. ರಾಘವೇಂದ್ರ, ಜನಾರ್ದನ ಸ್ವಾಮಿ, ಅನಂತ್ ಕುಮಾರ್ ಹೆಗ್ಡೆ ಮತ್ತು ಪಿ.ಸಿ. ಗದ್ದಿಗೌಡರ್ ಹಾಗೂ ರಾಜ್ಯಸಭೆಯ ಸದಸ್ಯ ರಾಮ ಜೋಯಿಸ್ ಸಿಎಂ ಸಮಾಲೋಚನೆಗೆ ಬಂದಿದ್ದರು.

ಭಿನ್ನಮತದ ಸೂತ್ರಧಾರಿ-ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್, ರಮೇಶ್ ಜಿಗಜಿಣಗಿ, ಪ್ರಹ್ಲಾದ್ ಜೋಷಿ, ಶಾಂತಾ, ಫಕೀರಪ್ಪ, ನಳಿನ್ ಕುಮಾರ್ ಕಟೀಲು, ಎ. ಸುರೇಶ್ ಚನ್ನಬಸಪ್ಪ, ಎಸ್.ಸಿ. ಉದಾಸಿ, ಜಿ.ಎಂ. ಸಿದ್ಧೇಶ್ವರ್, ಡಿ.ವಿ. ಸದಾನಂದ ಗೌಡ ಮುಂತಾದ ಸಂಸದರು ಸಭೆಯಿಂದ ದೂರವೇ ಉಳಿದರು.

ಸಂಸತ್ ಅಧಿವೇಶನದ ಹಿನ್ನೆಲೆಯಲ್ಲಿ ಬಹುತೇಕ ಸಂಸದರು ದೆಹಲಿಯಲ್ಲೇ ಬೀಡು ಬಿಟ್ಟಿರುವ ಹೊರತಾಗಿಯೂ ಮುಖ್ಯಮಂತ್ರಿ ಕರೆದಿರುವ ಸಭೆಗೆ ಗೈರು ಹಾಜರಾಗುವ ಮೂಲಕ ಬಿಜೆಪಿಯಲ್ಲಿನ ಭಿನ್ನಮತ ತಾರಕಕ್ಕೇರಿರುವುದನ್ನು ಸಾರಿದರು.

ಈ ನಡುವೆ ಇಂದು ರಾತ್ರಿ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್. ಈಶ್ವರಪ್ಪ, ಗ್ರಾಮೀಣಾಭಿವೃದ್ಧಿ ಸಚಿವ ಜಗದೀಶ್ ಶೆಟ್ಟರ್ ನೇತೃತ್ವದ ಬಿಜೆಪಿ ನಿಯೋಗವೊಂದು ವರಿಷ್ಠರಿಗೆ ದೂರು ನೀಡಲಿದೆ ಎಂದು ಹೇಳಲಾಗುತ್ತಿದೆ. ಮುಖ್ಯಮಂತ್ರಿಯನ್ನು ಬದಲಾಯಿಸಬೇಕು ಎಂಬ ಏಕೈಕ ಅಜೆಂಡಾವನ್ನು ಮುಂದಿಟ್ಟುಕೊಂಡು ಈ ನಿಯೋಗ ದೆಹಲಿಗೆ ಹೋಗುತ್ತಿದೆ ಎಂದು ಮೂಲಗಳು ಹೇಳಿವೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರ್ಷದ ಹಿಂದೆ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ಹೆಡ್‌ಕಾನ್‌ಸ್ಟೇಬಲ್‌ ಕ್ವಾಟ್ರಸ್‌ನಲ್ಲೇ ಆತ್ಮಹತ್ಯೆ

ಅತ್ಯಾಚಾರ ಪ್ರಕರಣ: ಇದೇ 30ರಂದು ಪ್ರಜ್ವಲ್ ರೇವಣ್ಣಗೆ ಜಾಮೀನಾ, ಜೈಲಾ, ಮಹತ್ವದ ತೀರ್ಪು

ಲೈವ್‌ನಲ್ಲಿ ವರದಿ ಮಾಡುತ್ತಿರುವಾಗಲೇ ಪ್ರವಾಹದಲ್ಲಿ ಕೊಚ್ಚಿ ಹೋದ ಪಾಕ್‌ ವರದಿಗಾರ, Viral Vdeo

ಶಾಸಕರು ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಳ್ಳುತ್ತಿರುವಾಗಲೇ ರಮ್ಮಿ ಆಡುತ್ತಾ ಕೂತಾ ಉಪ ಅರಣ್ಯ ಸಂರಕ್ಷಣಾಧಿಕಾರಿ

ನೂರಾರು ಹುಡುಗರ ಗುಂಪೊಂದು ಹಾವು ಹಿಡಿದು ಗುಡ್ಡವೇರಿದ ವಿಡಿಯೋ, ಭಯಾನಕವಾಗಿರುವ ಸಂಪ್ರದಾಯದ ಹಿಂದಿದೆ ನಂಬಿಕೆ

Show comments