Webdunia - Bharat's app for daily news and videos

Install App

ರಾಜಕೀಯಕ್ಕೆ ಧರ್ಮ ಬೆರೆಸಬೇಡಿ: ರಾಮದೇವ್‌ಗೆ ಕಾಂಗ್ರೆಸ್

Webdunia
ಮಂಗಳವಾರ, 1 ಮಾರ್ಚ್ 2011 (09:06 IST)
ಭ್ರಷ್ಟಾಚಾರ ಮತ್ತು ಕಪ್ಪುಹಣದ ವಿರುದ್ಧ ರಾಷ್ಟ್ರವ್ಯಾಪಿ ಹೋರಾಟ ನಡೆಸುತ್ತಿರುವ ಯೋಗ ಗುರು ಬಾಬಾ ರಾಮದೇವ್ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್, ರಾಜಕೀಯದಲ್ಲಿ ಧರ್ಮವನ್ನು ಬೆರೆಸದಂತೆ ಸಲಹೆ ನೀಡಿದೆ.

ಬಾಬಾ ರಾಮದೇವ್ ಧಾರ್ಮಿಕ ಸಂಪ್ರದಾಯಗಳನ್ನು ಬಳಸಿಕೊಂಡು ಕೀಳು ರಾಜಕೀಯ ಮಾಡುವ ಮೂಲಕ ಹಾದಿ ತಪ್ಪಿಸುತ್ತಿದ್ದಾರೆ. ಈ ರೀತಿಯಾಗಿ ಕಾಷಾಯ ಧಾರಿಗಳು ತಮ್ಮ ಸ್ಥಾನವನ್ನು ಸಮಾಜದಲ್ಲಿ ದುರುಪಯೋಗಪಡಿಸಿಕೊಳ್ಳಬಾರದು ಎಂದು ಕಾಂಗ್ರೆಸ್ ವಕ್ತಾರ ಅಭಿಷೇಕ್ ಸಿಂಘ್ವಿ ಟೀಕಿಸಿದರು.

ಖಾವಿಧಾರಿಗಳು ರಾಜಕೀಯದೊಂದಿಗೆ ಧರ್ಮವನ್ನು ಬೆರೆಸುತ್ತಿರುವುದು ಸಮರ್ಥನೀಯವಲ್ಲ. ಹಾಗೆ ಮಾಡುವುದರಿಂದ ಸಮಾಜದಲ್ಲಿ ಮತ್ತು ಧಾರ್ಮಿಕ ಸಮೂಹಗಳಲ್ಲಿ ತಮ್ಮ ಗೌರವಗಳನ್ನು ಕಳೆದುಕೊಳ್ಳುತ್ತಾ ಸಾಗುತ್ತಾರೆ ಎಂದು ಎಚ್ಚರಿಸಿದರು.

ಹಗರಣಗಳಿಗೆ ಕಾಂಗ್ರೆಸ್ಸೇ ಕಾರಣ: ರಾಮದೇವ್
ಕಪ್ಪುಹಣದ ವಿರುದ್ಧದ ತನ್ನ ಹೋರಾಟವನ್ನು ಮುಂದುವರಿಸಿರುವ ರಾಮದೇವ್, ದೇಶದಲ್ಲಿನ ಶೇ.99 ಹಗರಣಗಳಿಗೆ ಕಾಂಗ್ರೆಸ್ ಹೊಣೆ ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರವನ್ನು ಅತಿ ಭ್ರಷ್ಟ ಸರಕಾರ ಎಂದು ಜರೆದರು. ಈ ದೇಶದಲ್ಲಿ ಅತಿ ಹೆಚ್ಚು ಕಾಲ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷವು ದೇಶದ ಶೇ.99ರಷ್ಟು ಭ್ರಷ್ಟಾಚಾರಕ್ಕೆ ಜವಾಬ್ದಾರಿ ಎಂದು ಆರೋಪಿಸಿದರು.

ದೇಶವು ಭ್ರಷ್ಟಾಚಾರ ಮತ್ತು ಕಪ್ಪುಹಣದಿಂದಾಗಿ ಭಾರೀ ಅಪಾಯಕಾರಿ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಇದನ್ನು ತಡೆಗಟ್ಟಲು ಗಂಭೀರವಾಗಿ ಯೋಚಿಸಬೇಕು ಮತ್ತು ಕಠಿಣ ಕಾನೂನುಗಳನ್ನು ಜಾರಿಗೆ ತರಬೇಕು. ಹೇಗಾದರೂ ಮಾಡಿ ಕಪ್ಪುಹಣವನ್ನು ದೇಶಕ್ಕೆ ವಾಪಸ್ ತರಬೇಕು. ದೇಶದಲ್ಲಿನ ವಿದೇಶಿ ಬ್ಯಾಂಕುಗಳ ಪರವಾನಗಿಗಳನ್ನು ತಕ್ಷಣದಿಂದಲೇ ರದ್ದು ಮಾಡಬೇಕು. ಮಾರಿಷಸ್ ದಾರಿಯನ್ನು ಕೂಡ ಬಂದ್ ಮಾಡಬೇಕು ಎಂದು ಕೇಂದ್ರ ಸರಕಾರವನ್ನು ಇದೇ ಸಂದರ್ಭದಲ್ಲಿ ರಾಮದೇವ್ ಆಗ್ರಹಿಸಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

Show comments