ತಮ್ಮ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ರಾಜಸ್ಥಾನ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಬಾಬುಲಾಲ್ನಗರ್ ಅವರು ಗುರುವಾರ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ರಾಜೀನಾಮೆ ನೀಡುವಂತೆ ಯಾರೂ ತಮ್ಮನ್ನು ಕೇಳಿರಲಿಲ್ಲ. ಆದರೆ ನಿಷ್ಪಕ್ಷಪಾತ ತನಿಖೆಗೆ ಅನುಕೂಲವಾಗಲೆಂದು ನಾನೇ ನೈತಿಕ ಹೊಣೆಹೊತ್ತು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ರಾಜಿನಾಮೆ ನೀಡಿದ ಬಳಿಕ ಬಾಬುಲಾಲ್ ತಿಳಿಸಿದ್ದಾರೆ.
ತಮ್ಮ ನಿವಾಸದಲ್ಲೇ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಬಾಬುಲಾಲ್ ವಿರುದ್ಧ ರೇಪ್ ಕೇಸ್ ದಾಖಲಿಸುವಂತೆ ಕಳೆದ ಮಂಗಳವಾರ ಜೈಪುರ್ ಕೋರ್ಟ್ ಪೊಲೀಸರಿಗೆ ಆದೇಶಿಸಿತ್ತು. ಕೋರ್ಟ್ ಆದೇಶದ ಮೇರೆಗೆ ಸಚಿವರ ವಿರುದ್ಧ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿದ್ದರು.
ಸೆಪ್ಟಂಬರ್ 13ರಂದು ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ್ದ ಮಹಿಳೆ. ಕೆಲಸ ಕೊಡಿಸುವುದಾಗಿ ಹೇಳಿ ಸಚಿವ ಬಾಬುಲಾಲ್ನಗರ್ ಅವರು ಸೆ, 11ರಂದು ಮಧ್ಯಾಹ್ನ ಮನೆಗೆ ಬರುವಂತೆ ಹೇಳಿದರು. ಅದರಂತೆ ನಾನು ಅಲ್ಲಿಗೆ ಹೋದಾಗ ಸಚಿವರು ನನಗೆ ಕುಡಿಯುಂತೆ ಬಲವಂತ ಮಾಡಿದರು. ಅಲ್ಲದೆ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ. ಈ ವಿಚಾರವಾಗಿ ಹೊರಗಡೆ ಯಾರಿಗು ತಿಳಿಸದಂತೆ ಬೆದರಿಕೆ ಹಾಕಿದ್ದರು ಎಂದು ದೂರಿದ್ದರು.