Webdunia - Bharat's app for daily news and videos

Install App

ರಾಣೆ ಬೆಂಬಲಿಗರು-ಕಾಂಗ್ರೆಸಿಗರ ನಡುವೆ ಹೊಯ್ ಕೈ!

ರಾಣೆ ಪತ್ರನೂ ಕಾಂಗ್ರೆಸ್‌ನಿಂದ ಉಚ್ಚಾಟನೆ

Webdunia
ಬುಧವಾರ, 10 ಡಿಸೆಂಬರ್ 2008 (19:25 IST)
ಮಹಾರಾಷ್ಟ್ರ ಕಾಂಗ್ರೆಸ್ ಮತ್ತು ನಾರಾಯಣ ರಾಣೆ ಅವರ ನಡುವಿನ ಶೀತಲ ಸಮರ ಬುಧವಾರ ಸ್ಫೋಟಗೊಂಡಿದ್ದು, ರಾಣೆ ಬೆಂಬಲಿಗರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಪೊಲೀಸರ ಸಮ್ಮುಖದಲ್ಲೇ ಹೊಯ್ ಕೈ ನಡೆದಿದೆ.

ಮಹಾರಾಷ್ಟ್ರದ ಮಾಜಿ ಕಂದಾಯ ಸಚಿವ ನಾರಾಯಣ ರಾಣೆವರ ಪುತ್ರ ನಿತೀಶ್ ರಾಣೆಯವರನ್ನು ಕಾಂಗ್ರೆಸ್ ಉಚ್ಚಾಟನೆಗೊಳಿಸಿದಾಗ ಮುಂಬೈಯಲ್ಲಿರುವ ಪಕ್ಷದ ಮುಖ್ಯಕಚೇರಿ ಎದುರುಗಡೆ ಮಾರಾಮಾರಿ ನಡೆದಿತ್ತು. ನಿತೀಶ್ ಅವರು ಮುಂಬೈ ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಅವರನ್ನು ಪಕ್ಷದಿಂದ ಅಮಾನತ್ತುಗೊಳಿಸಲಾಗಿತ್ತು.

ಮಾರಾಮಾರಿಯಲ್ಲಿ ತೊಡಗಿದ್ದ ಉಭಯ ಬಣಗಳನ್ನು ಚದುರಿಸಲು ಪೊಲೀಸರು ಲಾಠಿಛಾರ್ಜ್ ಮಾಡಬೇಕಾಯಿತು.

ಮುಂಬೈ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ವಿಲಾಸ್‌ರಾವ್ ದೇಶ್‌ಮುಖ್ ಅವರ ರಾಜೀನಾಮೆಯಿಂದ ತೆರವಾಗಿರುವ ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ನಾರಾಯಣ ರಾಣೆ, ತನ್ನ ಆಸೆ ಕೈಗೂಡದೆ ಆ ಪಟ್ಟ ಅಶೋಕ ಚವ್ಹಾಣ್ ಅವರ ಪಾಲಾದಾಗ ಬಹಿರಂಗ ಬಂಡಾಯ ಎದ್ದಿದ್ದು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಕುರಿತು ಅವಹೇಳನಕಾರಿ ಮಾತುಗಳನ್ನಾಡಿದ್ದರು.

ಚೌವ್ಹಾಣ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಸೂಕ್ತ ಅಭ್ಯರ್ಥಿಯೇ ಅಲ್ಲ ಎಂದಿದ್ದ ರಾಣೆ, ಅವರು ತಮ್ಮ ಖಾತೆಯನ್ನು ನಿಭಾಯಿಸುವಲ್ಲೂ ಸೋತಿದ್ದಾರೆ ಎಂದು ಟೀಕಿಸಿದ್ದರು.

ಈ ಹಿನ್ನೆಲೆಯಲ್ಲಿ ಪಕ್ಷವಿರೋಧಿ ವರ್ತನೆಗಾಗಿ ನಾರಾಯಣ ರಾಣೆಯವರನ್ನು ಪಕ್ಷವು ಅಮಾನತ್ತುಗೊಳಿಸಿತ್ತು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments