Webdunia - Bharat's app for daily news and videos

Install App

ರಾಹುಲ್ ಗಾಂಧಿ ತಮಿಳುನಾಡಿಗೆ ಭೇಟಿ

Webdunia
ಮಂಗಳವಾರ, 23 ಅಕ್ಟೋಬರ್ 2007 (20:01 IST)
ಎಐಸಿಸಿ ಪ್ರಧಾನಕಾರ್ಯದರ್ಶಿ ರಾಹುಲ್ ಗಾಂಧಿ ಅವರು ಮುಂದಿನ ವರ್ಷ ಜನವರಿಯಲ್ಲಿ ತಮಿಳುನಾಡಿಗೆ ಭೇಟಿ ನೀಡುವರೆಂದು ನಿರೀಕ್ಷಿಸಲಾಗಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ಪ್ರಯತ್ನವಾಗಿ ಅವರು ಇಲ್ಲಿಗೆ ಭೇಟಿ ನೀಡಲಿದ್ದಾರೆ.

ಈ ಭೇಟಿಯು ರಾಷ್ಟ್ರಾದ್ಯಂತ ಪಕ್ಷವನ್ನು ಬಲಿಷ್ಠಗೊಳಿಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೈಗೊಂಡಿರುವ ಉಪಕ್ರಮದ ಭಾಗವಾಗಿದೆ ಎಂದು ಪಿಸಿಸಿ ಅಧ್ಯಕ್ಷ ಎಂ. ಕೃಷ್ಣಸ್ವಾಮಿ ಮಂಗಳವಾರ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು ರಾಹುಲ್ ಕಾಂಗ್ರೆಸ್ ಸಮಿತಿ ನಾಯಕರು ಮತ್ತು ಕೆಲವು ಆಯ್ದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು. ರಾಜ್ಯದಲ್ಲಿ ಪಕ್ಷದ ವ್ಯವಹಾರಗಳ ಉಸ್ತುವಾರಿ ವಹಿಸಿರುವ ಅರುಣ್ ಕುಮಾರ್ ಭೇಟಿಗೆ ಸಿದ್ಧತೆಗಳನ್ನು ಮಾಡಲಿದ್ದಾರೆ.

ಪಕ್ಷವು ರಾಜ್ಯದಲ್ಲಿ 2011ರೊಳಗೆ ಇನ್ನೊಂದು ಕಾಮರಾಜ್ ಆಡಳಿತವನ್ನು ಸ್ಥಾಪಿಸುವುದೆಂದು ಕೃಷ್ಣಸ್ವಾಮಿ ಭರವಸೆ ವ್ಯಕ್ತಪಡಿಸಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments