Webdunia - Bharat's app for daily news and videos

Install App

ರೈತರ ಸ್ಥಿತಿ ಸುಧಾರಣೆಗೆ ಕ್ರಮ: ಪ್ರಧಾನಿ

Webdunia
ಶನಿವಾರ, 17 ನವೆಂಬರ್ 2007 (18:43 IST)
PTI
ರೈತರ ಸ್ಥಿತಿಗತಿ ಸುಧಾರಣೆಗೆ ಸರ್ಕಾರ ಶೀಘ್ರದಲ್ಲೇ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಪ್ರಧಾನಮಂತ್ರಿ ಮನಮೋಹನ ಸಿಂಗ್ ಶನಿವಾರ ತಿಳಿಸಿ, ಒಂದು ದಶಕದೊಳಗೆ ಭಾರತದ ಬಡತನದ ದರವನ್ನು ಒಂದಂಕಿಗೆ ಇಳಿಸುವ ಭರವಸೆಯನ್ನು ನೀಡಿದರು. ಮುಂಬರುವ ವಾರಗಳಲ್ಲಿ ರೈತರ ಪರಿಸ್ಥಿತಿ ಸುಧಾರಣೆಗೆ ಇನ್ನಷ್ಟು ಕ್ರಮಗಳ್ನು ಕೈಗೊಳ್ಳುವ ಯೋಜನೆ ಹೊಂದಿದ್ದೇವೆ ಎಂದು ಸಿಂಗ್ ಹೇಳಿದರು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧಿವೇಶನ ಉದ್ದೇಶಿಸಿ ಅವರು ಮಾತನಾಡುತ್ತಿದ್ದರು,

ಕಳೆದ ಮೂರು ವರ್ಷಗಳಲ್ಲಿ ರಾಷ್ಟ್ರ ಶೇ. 4ರಷ್ಟು ಸರಾಸರಿ ಕೃಷಿ ಪ್ರಗತಿ ದರವನ್ನು ದೀರ್ಘ ಕಾಲದ ಅಂತರದ ಬಳಿಕ ಸಾಧಿಸಿದೆ. ಭವಿಷ್ಯದಲ್ಲಿ ಪ್ರಗತಿ ದರವನ್ನು ಕಾಯ್ದುಕೊಳ್ಳುವುದು ಸರ್ಕಾರದ ಗುರಿಯಾಗಿದೆ ಎಂದು ಅವರು ನುಡಿದರು. ಒಟ್ಟಾರೆ ಆರ್ಥಿಕ ದರವು ಕಳೆದ ಮೂರು ವರ್ಷಗಳಲ್ಲಿ ಸರಾಸರಿ ಶೇ.9ನ್ನು ಮುಟ್ಟಿದೆ.

ಬೆಳವಣಿಗೆ ಹಾದಿಯಲ್ಲಿ ನಾವು ರಾಷ್ಟ್ರವನ್ನು ಮುಂದುವರಿಸಿದರೆ ಬಡತನದ ದರವನ್ನು ಮುಂದಿನ ದಶಕದೊಳಗೆ ಒಂದಂಕಿಗೆ ಇಳಿಸಲು ಸಾಧ್ಯವಾಗಬಹುದು ಎಂದು ಪ್ರಧಾನಿ ಭರವಸೆ ವ್ಯಕ್ತಪಡಿಸಿದರು. 11ನೆ ಯೋಜನೆಯಲ್ಲಿ ಬಡತನವನ್ನು ಶೇ.28ರಿಂದ ಶೇ.18ಕ್ಕೆ ಇಳಿಸುವ ಗುರಿ ಹೊಂದಲಾಗಿದೆ.

ಪ್ರಸಕ್ತ ರಾಷ್ಟ್ರದಲ್ಲಿ 28 ಕೋಟಿ ಜನರು ಕಡುಬಡವರಿದ್ದಾರೆ. ಅಗತ್ಯ ಪದಾರ್ಥಗಳ ಬೆಲೆ ಹೆಚ್ಚುತ್ತಿರುವ ಬಗ್ಗೆ ಪಕ್ಷದ ಕಾರ್ಯಕರ್ತರ ಕಳವಳಕ್ಕೆ ಸ್ಪಂದಿಸಿದ ಅವರು, ಕಚ್ಚಾ ತೈಲದ ಬೆಲೆ ಏರಿಕೆ ಮುಂತಾದ ಜಾಗತಿಕ ಅಂಶಗಳ ಬಗ್ಗೆ ಸರ್ಕಾರದ ನಿಯಂತ್ರಣ ಕಡಿಮೆಯೆಂದು ಹೇಳಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments