Webdunia - Bharat's app for daily news and videos

Install App

'ಲೂಟಿಕೋರ' ಗೌಡ, ಕುಮಾರಸ್ವಾಮಿಗೆ ದೆಹಲಿಯಲ್ಲಿ ಧಿಕ್ಕಾರ

Webdunia
ಗುರುವಾರ, 17 ಮಾರ್ಚ್ 2011 (16:22 IST)
ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ಪ್ರೇರಣಾ ಟ್ರಸ್ಟ್‌ಗೆ ನೀಡಲಾದ ದೇಣಿಗೆಯನ್ನು ಹಗರಣ ಎಂದು ಬಣ್ಣಿಸಿ ಲೋಕಸಭೆಯಲ್ಲಿ ಬುಧವಾರ ಗದ್ದಲವೆಬ್ಬಿಸಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ವರ್ತನೆಯನ್ನು ಖಂಡಿಸಿದ ಬಿಜೆಪಿ ಸಂಸದರು ಗುರುವಾರ ಸಂಸತ್ತಿನ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿ, ಅಪ್ಪ-ಮಕ್ಕಳಿಗೆ ಧಿಕ್ಕಾರ ಕೂಗಿದರು.

ಗುರುವಾರ ಬೆಳಿಗ್ಗೆ ನಡೆದ ಧರಣಿಯ ನೇತೃತ್ವವನ್ನು ಕರ್ನಾಟಕದ ಸಂಸದರಾದ ಡಿ.ವಿ.ಸದಾನಂದ ಗೌಡ ಮತ್ತು ಬಿ.ವೈ.ರಾಘವೇಂದ್ರ ವಹಿಸಿದ್ದು, ಸಂಸದರೆಲ್ಲರೂ ದೇವೇಗೌಡ ಹಾಗೂ ಮಗ ಕುಮಾರಸ್ವಾಮಿ ವಿರುದ್ಧ ಧಿಕ್ಕಾರ ಕೂಗಿದರು.

ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮತ್ತು ಅದಕ್ಕೂ ಮೊದಲು ದೇವೇಗೌಡರೊಂದಿಗೆ ಸೇರಿಕೊಂಡು ಕರ್ನಾಟಕವನ್ನು ಲೂಟಿ ಮಾಡಿದ್ದಾರೆ ಎಂದು ಆರೋಪಿಸಿದ ಸಂಸದರು, ಇಬ್ಬರಿಗೂ ಧಿಕ್ಕಾರ ಕೂಗಿದರು.

ಸ್ಥಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದ ಗೌಡ, ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ತಮ್ಮವರಿಗೆ 48 ಸೈಟುಗಳನ್ನು ಕೊಡಿಸಿದ್ದಾರೆ. ಮೈಸೂರಿನಲ್ಲಿ ಕೂಡ 40ರಷ್ಟು ಸೈಟುಗಳನ್ನು ದೇವೇಗೌಡರ ಕುಟುಂಬದವರಿಗೇ ವಿತರಿಸಲಾಗಿದ್ದು, ಇದರಿಂದಾಗಿ ರಾಜ್ಯ ಸರಕಾರಕ್ಕೆ ನೂರಾರು ಕೋಟಿ ರೂಪಾಯಿಯಷ್ಟು ನಷ್ಟವಾಗಿದೆ. ಈ ಬಗ್ಗೆ ಕೇಂದ್ರ ಸರಕಾರವು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

6 ತಿಂಗಳಲ್ಲಿ 167 ಕೋಟಿ ಎಲ್ಲಿಂದ...
ಕಳೆದ ಆರು ತಿಂಗಳಲ್ಲಿ ಕುಮಾರಸ್ವಾಮಿಯ ಬೆಂಗಳೂರು ಮಿನರ್ವ ವೃತ್ತದಲ್ಲಿರುವ ಬ್ಯಾಂಕ್ ಖಾತೆಗೆ 167 ಕೋಟಿ ರೂಪಾಯಿ ಜಮೆಯಾಗಿದೆ. ಈ ಬಗ್ಗೆ ತನಿಖೆ ನಡೆಸಲಿ ಎಂದು ಆಗ್ರಹಿಸಿದರು.

ಅಲ್ಲದೆ, ಅಕ್ರಮ ಗಣಿಗಾರಿಕೆಯಲ್ಲಿ ಕೂಡ ಕುಮಾರಸ್ವಾಮಿ ಪಾಲುದಾರರಾಗಿರುವ ಬಗ್ಗೆ ಎಲ್ಲ ದಾಖಲೆಗಳೂ ಇರುವುದರಿಂದ ಕೇಂದ್ರ ಸರಕಾರವು ಅವರ ಮೇಲೆ ಕ್ರಮ ಕೈಗೊಳ್ಳಬೇಕಾಗಿದೆ ಎಂದವರು ಒತ್ತಾಯಿಸಿದರು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

Show comments