Webdunia - Bharat's app for daily news and videos

Install App

ವಿದ್ಯಾರ್ಥಿಯನ್ನು ಬೆನ್ನಟ್ಟಿ ಗುಂಡಿಕ್ಕಿ ಕೊಂದ ಸಚಿವನ ಪುತ್ರ

Webdunia
ಸೋಮವಾರ, 21 ಮಾರ್ಚ್ 2011 (15:42 IST)
ಮಣಿಪುರ ಸಚಿವರೊಬ್ಬರ ಪುತ್ರ 21ರ ಹರೆಯದ ವಿದ್ಯಾರ್ಥಿಯೊಬ್ಬನನ್ನು ತುಂಬಾ ದೂರ ಬೆನ್ನಟ್ಟಿದ ನಂತರ ಗುಂಡಿಕ್ಕಿ ಕೊಂದಿದ್ದಾನೆ ಎಂದು ಆರೋಪಿಸಲಾಗಿದೆ.

ಮಣಿಪುರದ ನೀರಾವರಿ, ನೆರೆ ನಿಯಂತ್ರಣ ಮತ್ತು ಕ್ರೀಡಾ ಸಚಿವ ಎನ್. ಬಿರೇನ್ ಸಿಂಗ್ ಅವರ 27ರ ಪುತ್ರ ಅಜಯ್ ಮೈತಾಯ್ ಎಂಬಾತನೇ ಆರೋಪಿ. ಬಲಿಯಾದ ವಿದ್ಯಾರ್ಥಿನಿಯನ್ನು ಇರೋಮ್ ರೋಜರ್ ಎಂದು ಗುರುತಿಸಲಾಗಿದೆ.

ಇಂಫಾಲ ಪಶ್ಚಿಮ ಜಿಲ್ಲೆಯಲ್ಲಿ ಭಾನುವಾರ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ, ರೋಜರ್ ತೆರಳುತ್ತಿದ್ದ ವಾಹನವನ್ನು ಬೆನ್ನಟ್ಟಿ ತನ್ನ ಎಂ-20 ಪಿಸ್ತೂಲಿನಿಂದ ಗುಂಡಿಕ್ಕಿ ಅಜಯ್ ಕೊಂದಿದ್ದಾನೆ. ಘಟನೆಯ ನಂತರ ಪೊಲೀಸರಿಗೆ ಪಿಸ್ತೂಲನ್ನು ಆರೋಪಿ ಒಪ್ಪಿಸಿದ್ದಾನೆ.

ವೈಯಕ್ತಿಕ ದ್ವೇಷವೇ ಕೊಲೆಗೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ.

ಘಟನೆಯನ್ನು ತೀವ್ರವಾಗಿ ಖಂಡಿಸಿರುವ ರೋಜರ್ ಮನೆಯ ಆಸುಪಾಸಿನ ನೂರಾರು ನಿವಾಸಿಗಳು ಮುಖ್ಯಮಂತ್ರಿಯವರ ಮನೆಗೆ ತೆರಳಿ, ಸಚಿವರ ಪುತ್ರನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಸಚಿವ ಬಿರೇನ್ ಸಿಂಗ್ ನಿವಾಸದತ್ತ ಸಾರ್ವಜನಿಕರು ರ‌್ಯಾಲಿ ನಡೆಸಲು ಸಿದ್ಧತೆ ನಡೆಸಿರುವುದು ಗಮನಕ್ಕೆ ಬಂದ ನಂತರ ಮುನ್ನೆಚ್ಚೆರಿಕೆ ಕ್ರಮವಾಗಿ ಸಚಿವರ ಮನೆಗೆ ಭಾರೀ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾದ್ರಾ ವಿರುದ್ಧ ಚಾರ್ಜ್‌ಶೀಟ್‌, ವಾದ್ರಾ, ಗಾಂಧಿ ಕುಟುಂಬಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ: ಮಲ್ಲಿಕಾರ್ಜುನ ಖರ್ಗೆ

ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು ಪ್ರಮಾಣ ವಚನ ಸ್ವೀಕಾರ

ಸಾಧನಾ ಸಮಾವೇಶ ನಡೆಸುತ್ತಿರುವ ಸಿದ್ದರಾಮಯ್ಯಗೆ 17 ಪ್ರಶ್ನೆ ಹಾಕಿದ ಆರ್ ಅಶೋಕ್

ನಾಲ್ವಡಿ ಕೃಷ್ಣರಾಜ ಒಡೆಯರ್ ನಂತರ ಮೈಸೂರನ್ನು ಅಭಿವೃದ್ಧಿಸಿದ್ದೆ ಸಿದ್ದರಾಮಯ್ಯ: ಎಚ್ ಸಿ ಮಹದೇವಪ್ಪ

Viral video: ಕಂಪನಿ ಎಚ್ ಆರ್ ಜೊತೆ ಅಫೇರ್: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿಇಒ

Show comments