Webdunia - Bharat's app for daily news and videos

Install App

ಶೇ. 9 ಸಾಕ್ಷರತೆ ಹೆಚ್ಚಳ: ಭಾರತದಲ್ಲಿ ಶೇ.74 ಮಂದಿ ಅಕ್ಷರಸ್ಥರು

Webdunia
ಶುಕ್ರವಾರ, 1 ಏಪ್ರಿಲ್ 2011 (09:14 IST)
ಕಳೆದ ಹತ್ತು ವರ್ಷಗಳಲ್ಲಿ ಭಾರತದ ಸಾಕ್ಷರತೆಯ ಪ್ರಮಾಣ ನಿಧಾನವಾಗಿ ಶೇ.9.2ರಷ್ಟು ಏರಿಕೆ ಕಂಡಿದೆ. ನವದೆಹಲಿಯಲ್ಲಿ ಗುರುವಾರ ಬಿಡುಗಡೆಗೊಳಿಸಿದ 2011ರ ಜನಗಣತಿಯ ತಾತ್ಕಾಲಿಕ ವರದಿಯಲ್ಲಿ ಇದನ್ನು ತಿಳಿಸಲಾಗಿದ್ದು, ಭಾರತದ 121 ಕೋಟಿ ಜನರಲ್ಲಿ ಸಾಕ್ಷರರ ಪ್ರಮಾಣ ಶೇ.74.04.

ಅಂದರೆ ಶೇ.26 ಮಂದಿ ಇಂದಿಗೂ ಅನಕ್ಷರಸ್ಥರು. 2001ರಲ್ಲಿ ಸಾಕ್ಷರತೆಯ ಪ್ರಮಾಣ ಶೇ.64.83 ಇತ್ತು. ವಿಶೇಷವಾಗಿ ಗಮನಿಸಬೇಕಾದ ಅಂಶವೆಂದರೆ, ಪುರುಷರಿಗೆ ಹೋಲಿಸಿದರೆ ಮಹಿಳಾ ಸಾಕ್ಷರತೆಯ ಪ್ರಮಾಣ ನೆಗೆದಿರುವುದು. 2001ರಲ್ಲಿ ಶೇ.53.67ರಷ್ಟಿದ್ದ ಮಹಿಳಾ ಸಾಕ್ಷರತೆ ಪ್ರಮಾಣವು ಹತ್ತು ವರ್ಷಗಳಲ್ಲಿ ಶೇ.65.46ಕ್ಕೇರಿದೆ. ಈ ನೆಗೆತಕ್ಕೆ ಹೋಲಿಸಿದರೆ ಪುರುಷರ ಸಾಕ್ಷರತೆಯ ವೃದ್ಧಿಯ ಪ್ರಮಾಣ ಕಡಿಮೆ. ಅಂದರೆ ಶೇ.75.26 ಇದ್ದದ್ದು ಶೇ.82.14ಕ್ಕೆ ಅದು ವೃದ್ಧಿಯಾಗಿದೆ.

ಕೇರಳವು ಶೇ.93.91 ಸಾಕ್ಷರತೆಯೊಂದಿಗೆ ದೇಶದಲ್ಲಿ ನಂ.1 ಸಾಕ್ಷರತಾ ರಾಜ್ಯ ಎಂಬ ಸ್ಥಾನವನ್ನು ಕಾಯ್ದುಕೊಂಡಿದೆ. ಜಿಲ್ಲೆಗಳಲ್ಲಿ ಮಿಜೋರಾಂನ ಸೆರ್ಚಿಪ್ (ಶೇ.98.76) ಮತ್ತು ಐಜ್ವಾಲ್ (ಶೇ. 98.50) ಅಗ್ರಸ್ಥಾನ ಪಡೆದಿವೆ.

ಕೇರಳದ ಬಳಿಕ ಎರಡನೇ ಸ್ಥಾನದಲ್ಲಿರುವುದು ಲಕ್ಷದ್ವೀಪ (ಶೇ.92.28). ಬಿಹಾರವಿನ್ನೂ ಶೇ.63.82 ಸಾಕ್ಷರತೆಯೊಂದಿಗೆ ಈ ಏಣಿಯ ಕೆಳತುದಿಯಲ್ಲಿದೆ. ಅರುಣಾಚಲ ಪ್ರದೇಶ ಶೇ.66.95 ಸಾಕ್ಷರತೆಯೊಂದಿಗೆ ಬಿಹಾರಕ್ಕಿಂತ ಮುಂದಿದೆ.

ಒಟ್ಟು 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ ಕೇರಳ, ಲಕ್ಷದ್ವೀಪ, ಮೀಜೋರಾಂ, ತ್ರಿಪುರ, ಗೋವಾ, ದಾಮನ್-ದಿಯು, ಪುದುಚೇರಿ, ಚಂಡೀಗಢ, ದೆಹಲಿ, ಮತ್ತು ಅಂಡಮಾನ್-ನಿಕೋಬಾರ್‌ಗಳು ಶೇ.85ಕ್ಕಿಂತ ಹೆಚ್ಚಿನ ಸಾಕ್ಷರತೆ ಪ್ರಮಾಣವನ್ನು ಸಾಧಿಸಿವೆ. 2011-12ರ ಅವಧಿಗೆ ಯೋಜನಾ ಆಯೋಗದ ಗುರಿಯೂ ಶೇ.85 ಸಾಕ್ಷರತೆಯಾಗಿತ್ತು.

2001 ರಲ್ಲಿ ಪುರುಷ ಮತ್ತು ಮಹಿಳಾ ಸಾಕ್ಷರರ ನಡುವಿನ ಅಂತರ ಶೇ.21.59 ಇದ್ದದ್ದು ಈ ಬಾರಿ ಶೇ.16.68ಕ್ಕೆ ಇಳಿಕೆಯಾಗಿದ್ದು ಸಂತಸಕರ ಸುದ್ದಿ. ಯೋಜನಾ ಆಯೋಗದ 2011-12ರ ಗುರಿ ಈ ಅಂತರವನ್ನು ಶೇ.10ಕ್ಕೆ ಇಳಿಸುವುದು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ರಾಪ್ತ ಮಗಳ ಮೇಲೆ ಮೂರು ವರ್ಷ ಲೈಂಗಿಕ ದೌರ್ಜನ್ಯ: ಪಾಪಿ ಅಪ್ಪನಿಗೆ ಜೀವಾವಧಿ ಶಿಕ್ಷೆ

ಯೋಗಿ ಸಿಎಂ ಆದ್ಮೇಲೆ ಯುಪಿಯಲ್ಲಿ 15 ಸಾವಿರ ಎನ್‌ಕೌಂಟರ್‌, 30 ಸಾವಿರ ಕ್ರಿಮಿನಲ್‌ಗಳ ಅರೆಸ್ಟ್‌

ಜಮೀನು ಒತ್ತುವರಿ ಪ್ರಕರಣ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಕುಮಾರಸ್ವಾಮಿಗೆ ಬಿಗ್ ರಿಲೀಫ್‌

ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳ ಡಿಎನ್‌ಎ ಟೆಸ್ಟ್‌ಗೆ ಮುಂದಾದ ಪಂಜಾಬ್ ಸರ್ಕಾರ

ಶುಭಾಂಶು ಶುಕ್ಲಾ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಇಸ್ರೋ

Show comments