Select Your Language

Notifications

webdunia
webdunia
webdunia
webdunia

ಸಚಿನ್ ತೆಂಡೂಲ್ಕರ್‌ಗೆ ಭಾರತ ರತ್ನ ನೀಡಿರುವುದು ನೀತಿ ಸಂಹಿತೆ ಉಲ್ಲಂಘನೆಯಲ್ಲ: ಚುನಾವಣೆ ಆಯೋಗ

ಸಚಿನ್ ತೆಂಡೂಲ್ಕರ್‌ಗೆ ಭಾರತ ರತ್ನ ನೀಡಿರುವುದು ನೀತಿ ಸಂಹಿತೆ ಉಲ್ಲಂಘನೆಯಲ್ಲ: ಚುನಾವಣೆ ಆಯೋಗ
ನವದೆಹಲಿ , ಬುಧವಾರ, 4 ಡಿಸೆಂಬರ್ 2013 (13:13 IST)
PTI
ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್‌ಗೆ ಭಾರತ ರತ್ನ ನೀಡಿರುವುದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ಆರ್‌ಟಿಐ ಕಾರ್ಯಕರ್ತ ದೇವ್ ಆಶೀಶ್ ಭಟ್ಟಾಚಾರ್ಯ ಚುನಾವಣೆ ಆಯೋಗಕ್ಕೆ ದೂರು ನೀಡಿ, ಐದು ರಾಜ್ಯಗಳಲ್ಲಿ ವಿಧಾನಸಭೆಗೆ ಚುನಾವಣೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ತೆಂಡೂಲ್ಕರ್‌ಗೆ ಭಾರತ ರತ್ನ ನೀಡಿ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದೆ ಎಂದು ದೂರಿದ್ದರು.

ಚುನಾವಣೆ ಸಂದರ್ಭದಲ್ಲಿ ಕೇಂದ್ರ ಸರಕಾರ ಯಾವುದೇ ಸರಕಾರಿ ಕಾರ್ಯನಿರ್ವಹಿಸದೇ ಮೌನವಾಗಿರಲು ಸಾಧ್ಯವಿಲ್ಲ. ಚುನಾವಣೆ ನಡೆಯದಿರುವ ರಾಜ್ಯಗಳ ಕ್ರೀಡಾಪಟುಗಳಿಗೆ ಪ್ರಶಸ್ತಿ ನೀಡುವುದರಿಂದ ನೀತಿ ಸಂಹಿತೆ ಉಲ್ಲಂಘನೆಯಾಗುವುದಿಲ್ಲ ಎಂದು ಚುನಾವಣೆ ಆಯೋಗ ಲಿಖಿತ ಉತ್ತರ ನೀಡಿದೆ.

Share this Story:

Follow Webdunia kannada