Webdunia - Bharat's app for daily news and videos

Install App

ಸಿಮಿಯ ಸುರಕ್ಷಿತ ತಾಣವಾಗಿ ಹೊರಹೊಮ್ಮುತ್ತಿರುವ ಕೇರಳ

Webdunia
ಸೋಮವಾರ, 18 ಆಗಸ್ಟ್ 2008 (11:12 IST)
ಸ್ಟೂಟೆಂಡ್ ಆಫ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ(ಸಿಮಿ)ದ ದಕ್ಷಿಣ ಭಾಗದ ಕೊಂಡಿಯನ್ನು ಗುಜರಾತ್ ಪೊಲೀಸರು ಬಹಿರಂಗಗೊಳಿಸಿದ ನಂತರ, ಕೇರಳವು ಸಿಮಿಯ ಸುರಕ್ಷಿತ ತಾಣವಾಗಿ ಹೊರಹೊಮ್ಮುತ್ತಿದೆ ಎಂದು ಕೇರಳ ರಾಜ್ಯ ಆಡಳಿತವು ಹೇಳಿದೆ.

ಕೇರಳ ಅರಣ್ಯಗಳನ್ನು ಸುರಕ್ಷತಾ ತಾಣವನ್ನಾಗಿ ಕಂಡುಕೊಂಡಿರುವ ಮಾವೋವಾದಿಗಳೂ, ಸಿಮಿ ಸಂಘಟನೆಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆಯು ಹೇಳಿದೆ.

ಸಂಪೂರ್ಣ ಪರಿಸ್ಥಿತಿಯನ್ನು ತಿಳಿದುಕೊಂಡು ಮಾನವ ಹಕ್ಕುಗಳ ಕಾರ್ಯಕರ್ತರು ತಮ್ಮ ಕಳವಳ ವ್ಯಕ್ತಪಡಿಸಬೇಕು ಎಂದಿರುವ ರಾಜ್ಯ ಗೃಹ ಸಚಿವ ಕೊಡಿಯೇರಿ ಬಾಲಕೃಷ್ಣನ್, ಇಂತಹ ಬೃಹತ್ ಸಮಸ್ಯೆಗೆ ಸಂಬಂಧಿಸಿದಂತೆ ಯಾವುದೇ ಸಡಿಲಿಕೆಯು ಮತ್ತಷ್ಟು ಸಮಸ್ಯೆಗಳಿಗೆ ಹಾದಿಯಾಗುತ್ತದೆ ಎಂದು ಹೇಳಿದ್ದಾರೆ.

ಏತನ್ಮಧ್ಯೆ, ಸಿಮಿಗೆ ಕೇರಳೊಂದಿಗೆ ಬಲವಾದ ಸಂಬಂಧ ಹೊಂದಿದ್ದು, ಡಿಸೆಂಬರ್ 2007ರಲ್ಲಿ ಅಲುವಾದಲ್ಲಿ ಸಿಮಿಯು ಪ್ರಮುಖ ಸಭೆಯನ್ನು ನಡೆಸಿತ್ತು ಎಂದು ಹೇಳಲಾಗಿದೆ. ಅಲ್ಲದೆ, ಈ ಸಭೆಯಲ್ಲಿ ಸಿಮಿ ಮುಖ್ಯಸ್ಥ ಸಫ್ದರ್ ನಾಗೋರಿ ಮತ್ತು ಆತನ ಪಿಎ ಶಿಬ್ಲಿ ಎಂಬಾತನೂ ಪಾಲ್ಗೊಂಡಿದ್ದ ಎಂದು ವರದಿಗಳು ಹೇಳಿವೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments