Webdunia - Bharat's app for daily news and videos

Install App

ಸಿವಿಸಿ: ಚವಾಣ್ ಮೇಲೆ ಪ್ರಧಾನಿ ಗೂಬೆ ಕೂರಿಸಿದ ಪಿಎಂ

Webdunia
ಮಂಗಳವಾರ, 8 ಮಾರ್ಚ್ 2011 (18:47 IST)
ಸಿವಿಸಿ ನೇಮಕಾತಿ ವಿವಾದದ ಹೊಣೆಯನ್ನು ನಾನೇ ಹೊರುತ್ತೇನೆ ಎಂದು ಪ್ರಧಾನಿ ಮನಮೋಹನ್ ಸಿಂಗ್ ಮಂಗಳವಾರ ಪುನರುಚ್ಚರಿಸಿದರೂ, ಇದಕ್ಕೆಲ್ಲಾ ಹೊಣೆ ಸಿಬ್ಬಂದಿ ಸಚಿವಾಲಯದ ಮಾಜಿ ರಾಜ್ಯ ಸಚಿವ ಪೃಥ್ವಿರಾಜ್ ಚವಾಣ್ ಎಂದರಲ್ಲದೆ, ಚವಾಣ್ ಕಳುಹಿಸಿದ ಟಿಪ್ಪಣಿಯಲ್ಲಿ ಪಿ.ಜೆ.ಥಾಮಸ್ ಮೇಲೆ ಭ್ರಷ್ಟಾಚಾರ ಪ್ರಕರಣ ದಾಖಲಾಗಿರುವ ವಿಷಯ ಇರಲೇ ಇಲ್ಲ ಎಂದಿದ್ದಾರೆ.

ರಾಜ್ಯಸಭೆಯಲ್ಲಿ ಮಂಗಳವಾರ ಪ್ರತಿಪಕ್ಷಗಳ ತೀವ್ರ ವಾಗ್ಬಾಣಗಳಿಗೆ ಉತ್ತರಿಸಿದ ಮನಮೋಹನ್ ಸಿಂಗ್, ಥಾಮಸ್ ನೇಮಕವನ್ನು ಸುಪ್ರೀಂ ಕೋರ್ಟ್ ಇದೀಗ ರದ್ದುಗೊಳಿಸಿದೆ. ಹೀಗಾಗಿ ತಪ್ಪು ತೀರ್ಮಾನ ಕೈಗೊಂಡಿದ್ದಕ್ಕೆ ಜವಾಬ್ದಾರಿ, ಹೊಣೆ ಹೊತ್ತುಕೊಳ್ಳುವೆ ಎಂದು ಹೇಳಿದರು.

ಸಮಿತಿಯ ಸಭೆಗೆ ಹೋಗುವ ಮೊದಲು ಥಾಮಸ್ ವಿರುದ್ಧ ಪಾಮೋಲಿನ್ ಹಗರಣದ ಕೇಸಿತ್ತು ಎಂಬುದು ನನಗೆ ಗೊತ್ತೇ ಇರಲಿಲ್ಲ ಎಂದ ಪ್ರಧಾನಿ, ಪ್ರತಿಪಕ್ಷ ನಾಯಕಿ ಸುಷ್ಮಾ ಸ್ವರಾಜ್ ಅವರು ಇದನ್ನು ಗಮನಕ್ಕೆ ತಂದ ಬಳಿಕವಷ್ಟೇ ವಿಷಯ ತಿಳಿಯಿತು ಎಂದರು.

ಇದಕ್ಕೆ ಮೊದಲು ತೀವ್ರ ವಾಕ್ಪ್ರಹಾರ ನಡೆಸಿದ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಅರುಣ್ ಜೇಟ್ಲಿ ಮತ್ತು ಸಿಪಿಎಂ ಮುಖಂಡ ಸೀತಾರಾಮ ಯೆಚೂರಿ, ಭ್ರಷ್ಟಾಚಾರದ ಕೇಸು ಇದ್ದರೂ ಕೂಡ ಥಾಮಸ್ ಹೆಸರನ್ನು ಶಾರ್ಟ್‌ಲಿಸ್ಟ್‌ನಲ್ಲಿ ಸೇರಿಸಿದ್ದು ಯಾರು, ಇತರ ಇಬ್ಬರು ಸ್ವಚ್ಛ ಚಾರಿತ್ರ್ಯದ ಅಧಿಕಾರಿಗಳ ಹೆಸರುಗಳಿದ್ದರೂ, ಥಾಮಸ್ ಅವರನ್ನೇ ಆರಿಸಿದ್ದೇಕೆ ಎಂದು ಪ್ರಶ್ನಿಸಿದರಲ್ಲದೆ, ಪಟ್ಟಿಯಲ್ಲಿ ಅವರ ಹೆಸರನ್ನು ಸೇರಿಸಿದವರನ್ನು ಹೊಣೆಯಾಗಿಸಬೇಕು ಎಂದು ಆಗ್ರಹಿಸಿದರು.

ಪೃಥ್ವಿರಾಜ್ ಚವಾಣ್ ಅವರು ಹಾಲಿ ಮಹಾರಾಷ್ಟ್ರದ ಕಾಂಗ್ರೆಸ್ ಮುಖ್ಯಮಂತ್ರಿಯಾಗಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಬಿಜೆಪಿ ರಾಜಾಧ್ಯಕ್ಷ ನೇಮಕ ವಿಳಂಬದ ಹಿಂದಿನ ಕಾರಣ ಬಿಚ್ಚಿಟ್ಟ ಶಾಸಕ ಬಸನಗೌಡ ಪಾಟೀಲ್

ಶೋಷಿತರನ್ನು ಮತಬ್ಯಾಂಕ್ ಮಾಡಿ ವಂಚಿಸುತ್ತ ಬಂದ ಕಾಂಗ್ರೆಸ್ ಪಕ್ಷ: ವಿಜಯೇಂದ್ರ

Show comments