Webdunia - Bharat's app for daily news and videos

Install App

‘ದಿನಕ್ಕೆ 20 ಗಂಟೆ ಕೆಲಸ ಮಾಡದಿದ್ದರೆ ಗಂಟು ಮೂಟೆ ಕಟ್ಟಿ’

Webdunia
ಸೋಮವಾರ, 27 ಮಾರ್ಚ್ 2017 (10:44 IST)
ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿಯಾದ ಮೇಲೆ ಸಿಎಂ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ. ದಿನದಲ್ಲಿ 20 ಗಂಟೆ ಕೆಲಸ ಮಾಡಲು ಸಿದ್ಧರಿಲ್ಲದಿದ್ದರೆ, ಮನೆಗೆ ಗಂಟು ಮೂಟೆ ಕಟ್ಟಿ ಎಂದು ಹೊಸದಾಗಿ ಸಿಎಂ ಸಾಹೇಬರು ಫರ್ಮಾನು ಹೊರಡಿಸಿದ್ದಾರೆ.

 

‘ದಿನಕ್ಕೆ 18-20 ಗಂಟೆ ಕೆಲಸ ಮಾಡಲು ರೆಡಿ ಇರುವ ಅಧಿಕಾರಿಗಳಿಗೆ ಸ್ವಾಗತ. ಇಲ್ಲದವರು ಮನೆಗೆ ಹೊರಡಲು ಸಿದ್ಧತೆ ಮಾಡಿಕೊಳ್ಳಬಹುದು’ ಎಂದು ಸಿಎಂ ಯೋಗಿ ಖಡಕ್ಕಾಗಿ ಹೇಳಿದ್ದಾರೆ. ಅನಧಿಕೃತ ಮಾಂಸದಂಗಡಿಗಳನ್ನು ನಿಷೇಧಿಸಿ ಪ್ರತಿಭಟನೆ ನಡೆಯುತ್ತಿರುವಾಗ ಕ್ಯಾರೇ ಎನ್ನದೆ ಸಿಎಂ ಯೋಗಿ ತಮ್ಮ ಖಡಕ್ ಕೆಲಸಗಳನ್ನು ಮುಂದುವರಿಸಿದ್ದಾರೆ.

 
ಮೊನ್ನೆಯಷ್ಟೇ ಕೆಲಸ ಮಾಡದ 100 ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದ ಸಿಎಂ ಗೋರಖ್ ಪುರದಲ್ಲಿ ಮಾತನಾಡುತ್ತಾ ‘ನಾನು ಕೆಲಸ ಮಾಡುವುದನ್ನು ಇಷ್ಟಪಡುತ್ತೇನೆ. ಅಧಿಕಾರಿಗಳು ಅವುಗಳನ್ನು ಜಾರಿಗೆ ತರಬೇಕು. ಜನರಿಗಾಗಿ ಮಾನವೀಯತೆಯಿಂದ ಕೆಲಸ ಮಾಡಲು ಕಲಿಯಬೇಕು’ ಎಂದು ಸಂದೇಶ ನೀಡಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments