Webdunia - Bharat's app for daily news and videos

Install App

ಸತ್ತಿದೆಯೆಂದು ಘೋಷಿಸಿದ್ದ ಮಗು ಸ್ಮಶಾನದಲ್ಲಿ ಉಸಿರಾಡಿತೇ?!

Webdunia
ಸೋಮವಾರ, 3 ಜುಲೈ 2017 (11:35 IST)
ಹೈದರಾಬಾದ್: ಸತ್ತಿದೆಯೆಂದು ವೈದ್ಯರು ಘೋಷಿಸಿದ್ದ ಮಗು ಇನ್ನೇನು ಅಂತ್ಯ ಸಂಸ್ಕಾರ ನಡೆಸಬೇಕೆನ್ನುವಷ್ಟರಲ್ಲಿ ಜೀವಂತವಿರುವ ಲಕ್ಷಣ ತೋರಿದೆಯೆಂದು ತೆಲಂಗಾಣದ ಎಂಜಿಎಂ ಆಸ್ಪತ್ರೆಯಲ್ಲಿ ದಾಂಧಲೆ ನಡೆಸಿದ್ದಾರೆ.


 
ಜೂನ್ 30 ರಂದು ಗರ್ಭಿಣಿ ಮಹಿಳೆಯೊಬ್ಬರು ಗಂಭೀರ ಪರಿಸ್ಥಿತಿಯಲ್ಲಿ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದರು. ಆದರೆ ಅಲ್ಲಿ ಅಗತ್ಯ ಸಲಕರಣೆಗಳಿಲ್ಲದ ಕಾರಣ ಅಲ್ಲಿನ ವೈದ್ಯರು ಆಕೆಯನ್ನು ಎಂಜಿಎಂ ಆಸ್ಪತ್ರೆಗೆ ದಾಖಲಿಸಲು ಸಲಹೆ ನೀಡಿದ್ದರು. ಅದರಂತೆ ಎಂಜಿಎಂ ಆಸ್ಪತ್ರೆಯಲ್ಲಿ ಮಗುವನ್ನು ಹೊರ ತೆಗೆಯಲಾಯಿತು.

ಆದರೆ ಅವಧಿ ಪೂರ್ಣವಾಗಿ ಹುಟ್ಟಿದ ಮಗು ಮೂರು ದಿನಕ್ಕೆ ಮೃತಪಟ್ಟಿದೆಯೆಂದು ವೈದ್ಯರು ಘೋಷಿಸಿದ್ದರು. ಅದರಂತೆ ಪೋಷಕರು ಮಗುವನ್ನು ಸ್ಮಶಾನಕ್ಕೆ ಕರೆದೊಯ್ದಾಗ ಮಗುವಿನಲ್ಲಿ ಚಲನವಲನ ಕಂಡುಬಂದಿದೆ ಎಂಬುದು ಅವರ ವಾದ. ಇದರಿಂದ ಸಿಟ್ಟಿಗೆದ್ದ ಪೋಷಕರು ಎಂಜಿಎಂ ಆಸ್ಪತ್ರೆಯ ವೈದ್ಯರ ವಿರುದ್ಧ ಕೂಗಾಡಿರುವುದಲ್ಲದೆ, ಆಸ್ಪತ್ರೆಯಲ್ಲಿ ದಾಂಧಲೆ ನಡೆಸಿದ್ದಾರೆ.

ಸರಿಯಾಗಿ ಇಸಿಜಿ ಪರೀಕ್ಷೆ ನಡೆಸಿಲ್ಲ ಎನ್ನುವುದು ಪೋಷಕರ ವಾದ. ಆದರೆ ವೈದ್ಯ ಸಿರಾಜುದ್ದೀನ್ ತಂಡ ತಮ್ಮದು ತಪ್ಪಿಲ್ಲ. ಮಗುವಿನ ಇಸಿಜಿ ಮತ್ತು ಹೃದಯ ಬಡಿತ ಪತ್ತೆಯಾಗದ ಕಾರಣ ಮೃತಪಟ್ಟಿದೆ ಎಂದು ಘೋಷಿಸಲಾಗಿದೆ ಎಂದಿದ್ದಾರೆ. ಅಂತೂ ಮಗುವಂತೂ ಈಗ ನಿಜವಾಗಿಯೂ ಬದುಕಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments