Webdunia - Bharat's app for daily news and videos

Install App

ಸ್ವಂತ ಮಕ್ಕಳು ಸೇರಿದಂತೆ ಐವರನ್ನು ಕೊಂದು ಆತ್ಮಹತ್ಯೆ

Webdunia
ಶುಕ್ರವಾರ, 4 ಸೆಪ್ಟಂಬರ್ 2015 (12:15 IST)
ಬಿಹಾರದ ಮುಝಪ್ಪರ್ ನಗರದಲ್ಲಿ ನಡೆದ ವಿಲಕ್ಷಣ ಘಟನೆಯೊಂದರಲ್ಲಿ ವ್ಯಕ್ತಿಯೊಬ್ಬ ತನ್ನ ಸ್ವಂತ ಹೆಣ್ಣು ಮಕ್ಕಳಿಬ್ಬರು ಮತ್ತು ನೆರೆಮನೆಯ ಮೂವರನ್ನು ಕೊಂದು  ತಾನು ಕೂಡ ಗುಂಡಿಕ್ಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. 

ವರದಿಗಳ ಪ್ರಕಾರ ಮೃತ ಆರೋಪಿ ಸತ್ಯೇಂದ್ರ ನೆರೆಮನೆಯವರೊಂದಿಗೆ ಯಾವುದೋ ಕಾರಣಕ್ಕೆ ಜಗಳಕ್ಕಿಳಿದಿದ್ದ. ವಾದ ವಿವಾದ ತಾರಕಕ್ಕೇರುತ್ತಿದ್ದಂತೆ ಆವೇಶದ ಭರದಲ್ಲಿ ಆತ ನೆರೆ ಮನೆ ನಿವಾಸಿಗಳನ್ನು ಗುಂಡಿಕ್ಕಿ ಕೊಂದಿದ್ದಾನೆ. ಬಳಿಕ ತನ್ನ ಹೆಣ್ಣು ಮಕ್ಕಳಿಬ್ಬರನ್ನು ಸಹ ಗುಂಡಿಕ್ಕಿ ಕೊಂದ ಆತ ತಾನು ಸಹ ಗುಂಡಿಕ್ಕಿಕೊಂಡು ಜೀವ ಕಳೆದುಕೊಂಡಿದ್ದಾನೆ. 
 
ಎರಡು ಕುಟುಂಬಗಳ ನಡುವಿನ ಸಂಬಂಧ ಹಳಸಿ ಹೋಗಿತ್ತು. ಆಗಾಗ ಜಗಳಗಳಾಗುತ್ತ ಇರುತ್ತಿತ್ತು ಎಂದು ನೆರೆಹೊರೆಯವರು ತಿಳಿಸಿದ್ದಾರೆ. 
 
ಮೃತರ ಶರೀರಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments