Webdunia - Bharat's app for daily news and videos

Install App

ಗುಜರಾತ್ ಭಾರತದ ಭಾಗವಲ್ಲವೇ?: ಕೇಂದ್ರ ಸರಕಾರದ ವಿರುದ್ಧ ಸುಪ್ರೀಂಕೋರ್ಟ್ ಕಿಡಿ

Webdunia
ಸೋಮವಾರ, 1 ಫೆಬ್ರವರಿ 2016 (16:42 IST)
ಸಂಸತ್ತಿನಲ್ಲಿ ಅಂಗೀಕಾರಗೊಂಡ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೊಳಿಸದಿರುವ ಗುಜರಾತ್ ಸರಕಾರದ ವಿರುದ್ಧ ಕಿಡಿಕಾರಿದ ಸುಪ್ರೀಂಕೋರ್ಟ್, ಗುಜರಾತ್ ಭಾರತದ ಭಾಗವಲ್ಲವೇ ಎಂದು ಪ್ರಶ್ನಿಸಿದೆ.
 
ಸಂಸತ್ತು ಏನು ಮಾಡುತ್ತಿದೆ? ಗುಜರಾತ್ ದೇಶದ ಭಾಗವಲ್ಲವೇ?ಸಂಪೂರ್ಣ ಭಾರತದಾದ್ಯಂತ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಜಾರಿಗೊಳಿಸಬೇಕು ಎನ್ನುವ ಕಾಯ್ದೆಗೆ ಸಂಸತ್ತಿನಲ್ಲಿ ಅಂಗೀಕಾರ ದೊರೆತಿದೆ. ಗುಜರಾತ್ ಸರಕಾರ ಕಾಯ್ದೆ ಜಾರಿಗೊಳಿಸಿಲ್ಲ. ನಾಳೆ ಇತರ ರಾಜ್ಯಗಳು ಸಿಆರ್‌ಪಿಸಿ, ಐಪಿಸಿ ಮತ್ತು ಸಾಕ್ಷ್ಯಾಧಾರ ಕಾಯ್ದೆ ಜಾರಿಗೊಳಿಸುವುದಿಲ್ಲ ಎಂದಲ್ಲಿ ಸಂಸತ್ತು ಮೌನವಾಗಿರುತ್ತದೆಯೇ ಎಂದು ನ್ಯಾಯಮೂರ್ತಿ ಮದನ್ ಬಿ.ಲೋಕುರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
 
ಗುಜರಾತ್ ರಾಜ್ಯದ ಬರಪೀಡಿತ ಪ್ರದೇಶಗಳಲ್ಲಿ ಎಂಜಿಎನ್‌ಆರ್‌ಇಜಿಎ, ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆ ಮತ್ತು ಮಧ್ಯಾಹ್ನದೂಟ ಯೋಜನೆಗಳ ಜಾರಿ ಕುರಿತಂತೆ ಸಂಪೂರ್ಣ ವರದಿ ನೀಡಿ ಎಂದು ಕೋರ್ಟ್ ಕೇಂದ್ರ ಸರಕಾರಕ್ಕೆ ಛೀಮಾರಿ ಹಾಕಿದೆ. 
 
ಮುಂಬರುವ ಫೆಬ್ರವರಿ 10 ರೊಳಗೆ ಕೇಂದ್ರ ಸರಕಾರ ಅಫಿಡವಿಟ್ ಸಲ್ಲಿಸಬೇಕು. ಎರಡು ದಿನಗಳ ನಂತರ ವಿಚಾರಣೆ ಆರಂಭಿಸಲಾಗುವುದು ಎಂದು ಕೋರ್ಟ್ ಆದೇಶ ನೀಡಿದೆ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments