‘ಕಸಬ್ ಬಡಪಾಯಿ, ಕುಲಭೂಷಣ್ ಒಬ್ಬ ದೊಡ್ಡ ಭಯೋತ್ಪಾದಕ’

Webdunia
ಭಾನುವಾರ, 21 ಮೇ 2017 (04:35 IST)
ಇಸ್ಲಾಮಾಬಾದ್: ಭಾರತದ ಮಾಜಿ ನೌಕಾ ಪಡೆ ಅಧಿಕಾರಿ ಕುಲಭೂಷಣ್ ಜಾದವ್ ಮುಂಬೈ ದಾಳಿಕೋರ ಅಜ್ಮಲ್ ಕಸಬ್ ಗಿಂತಲೂ ದೊಡ್ಡ ಭಯೋತ್ಪಾದಕ ಎಂದು ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಹೇಳಿಕೊಂಡಿದ್ದಾರೆ.

 
ಕುಲಭೂಷಣ್ ಭಾರತೀಯ ಗುಪ್ತಚರ ಎಂದಿರುವ ಪಾಕ್ ಅವರು ಬಲೂಚಿಸ್ತಾನದಲ್ಲಿ ಗಲಭೆ ನಡೆಸಲು ಕಾರಣಕರ್ತರಾಗಿದ್ದರು ಎಂದು ಆರೋಪಿಸಿದೆ. ಆದರೆ ಜಾದವ್ ವೈಯಕ್ತಿಕ ಕೆಲಸದ ಮೇಲೆ ಇರಾನ್ ಗೆ ತೆರಳಿದ್ದಾಗ ಅವರನ್ನು ಅಪಹರಿಸಿ ಇಲ್ಲಸಲ್ಲದ ಆರೋಪ ಹೊರಿಸಲಾಗುತ್ತಿದೆ ಎಂಬುದು ಭಾರತದ ಆರೋಪ.

ಈ ಪ್ರಕರಣ ಐಸಿಜೆ ಮಟ್ಟಿಲೇರಿದ್ದು, ಕುಲಭೂಷಣ್ ಗೆ ವಿಧಿಸಿದ್ದ ಗಲ್ಲು ಶಿಕ್ಷೆಗೆ ತಡೆಯಾಜ್ಞೆ ಬಂದಿದೆ. ಹೀಗಾಗಿ ಈ ಪ್ರಕರಣವನ್ನು ಐಸಿಜೆ ಬಳಿಗೆ ಕೊಂಡೊಯ್ಯಲು ಪಾಕ್ ಒಪ್ಪಬಾರದಿತ್ತು ಎಂದು ಮುಷರಫ್ ಹೇಳಿಕೊಂಡಿದ್ದಾರೆ.

ಕಸಬ್ ಒಬ್ಬ ಬಡಪಾಯಿಯಾಗಿದ್ದ. ಆದರೆ ಜಾದವ್ ಎಷ್ಟು ಪಾಕಿಸ್ತಾನಿಯರನ್ನು ಕೊಂದ ಎನ್ನುವುದೇ ಲೆಕ್ಕಕ್ಕೆ ಸಿಗದು ಎಂದು ಅವರು ಹೇಳಿಕೊಂಡಿದ್ದಾರೆ. ಅಲ್ಲದೆ, ಪಾಕ್ ಈ ವಿಚಾರದಲ್ಲಿ ಐಸಿಜೆ ತೀರ್ಪನ್ನು ಪಾಲಿಸಬೇಕೆಂದೇನಿಲ್ಲ ಎಂದೂ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments