Webdunia - Bharat's app for daily news and videos

Install App

‘ಜನ ಈಗ ಏನಿದ್ದರೂ ರಾಹುಲ್ ಗಾಂಧಿ ಮಾತೇ ಕೇಳೋದು’

Webdunia
ಮಂಗಳವಾರ, 31 ಅಕ್ಟೋಬರ್ 2017 (09:49 IST)
ಮುಂಬೈ: ಮತ್ತೊಮ್ಮೆ ಶಿವಸೇನೆ ಬಿಜೆಪಿ ವಿರುದ್ಧ ಗುಟುರು ಹಾಕಿದೆ. ಬಿಜೆಪಿ ತನ್ನ ಪ್ರಥಮ ಶತ್ರು ಎಂದಿರುವ ಶಿವಸೇನೆ, ರಾಹುಲ್ ಗಾಂಧಿಯನ್ನು ಹೊಗಳಿ ಅಟ್ಟಕ್ಕೇರಿಸಿದೆ.

 
ಶಿವಸೇನೆ ಸಂಸದ ಸಂಜಯ್ ರಾವತ್ ತಮ್ಮ ಮಿತ್ರ ಪಕ್ಷ ಬಿಜೆಪಿಯನ್ನೇ ಪ್ರಮುಖ ಶತ್ರು ಎಂದು ಕರೆದಿದ್ದಾರೆ. ಅಲ್ಲದೆ, ಮಹಾರಾಷ್ಟ್ರ ಸರ್ಕಾರದಲ್ಲಿ ನಾಮಕಾವಸ್ಥೆ ಜತೆಗಿರುವುದಾಗಿ ಹೇಳಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಮೋದಿ ಜನಪ್ರಿಯತೆ ಕುಂದುತ್ತಿದೆ. ರಾಹುಲ್ ಶೈನ್ ಆಗುತ್ತಿದ್ದಾರೆ ಎಂದು ಶಿವಸೇನೆ ಹೇಳಿತ್ತು.

ಅದರ ಬೆನ್ನಲ್ಲೇ ಮತ್ತೊಮ್ಮೆ ಕಾಂಗ್ರೆಸ್ ಉಪಾಧ್ಯಕ್ಷರ ಗುಣಗಾನ ಮಾಡಿರುವ ಸಂಜಯ್ ರಾವತ್ ‘ಕಳೆದ ಮೂರು ವರ್ಷಗಳಲ್ಲಿ ರಾಹುಲ್ ಗಾಂಧಿ ಗಮನಾರ್ಹವಾಗಿ ಬದಲಾಗಿದ್ದಾರೆ. ಜನ ಈಗ ಅವರ ಮಾತನ್ನೇ ಕೇಳುತ್ತಿದ್ದಾರೆ’ ಎಂದು ಹೊಗಳಿದ್ದಾರೆ. ಪಕ್ಕಾ ಹಿಂದುತ್ವ ಸಿದ್ಧಾಂತ ಪರಿಪಾಲಕರಾಗಿರುವ ಶಿವಸೇನೆ ನಾಯಕರು ಕಾಂಗ್ರೆಸ್ ಗೆ ಈ ರೀತಿ ಮಣೆ ಹಾಕುತ್ತಿರುವುದು ಅಚ್ಚರಿ ಮೂಡಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments