Webdunia - Bharat's app for daily news and videos

Install App

ಯುಪಿಯಲ್ಲಿ ಗೂಂಡಾರಾಜ್ಯ?: ಪೊಲೀಸ್ ಅಧಿಕಾರಿ ಕಗ್ಗೊಲೆ

Webdunia
ಗುರುವಾರ, 23 ಜೂನ್ 2016 (15:52 IST)
ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಅಪರಾಧಗಳಿಗೆ ಎಣೆಯೇ ಇಲ್ಲವಾಗಿದೆ. ಸಾಮಾನ್ಯರ ಮಾತು ಬಿಡಿ, ರಕ್ಷಣೆ ಮಾಡುವವವರೇ ಇಲ್ಲಿ ಸುರಕ್ಷಿತವಾಗಿಲ್ಲ ಎಂಬುದನ್ನು ಸ್ಪಷ್ಟೀಕರಿಸುವ ಘಟನೆಯೊಂದು ರಾಜ್ಯದಲ್ಲಿ ನಡೆದಿದ್ದು ಸಶಸ್ತ್ರಧಾರಿ ಗೂಂಡಾಗಳು ಪೊಲೀಸ್ ಅಧಿಕಾರಿಯೊಬ್ಬರನ್ನು ಬರ್ಬರವಾಗಿ ಕೊಂದು ಹಾಕಿದ್ದಾರೆ. 
 
ಬುಧವಾರ ತಡರಾತ್ರಿ ಬರೇಲಿ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. 
 
ಮೂವರು ದರೋಡೆಕೋರರ ಬಗ್ಗೆ ಮಾಹಿತಿ ಪಡೆದ ಸಬ್ ಇನ್ಸಪೆಕ್ಟರ್ ಸರ್ವೇಶ್ ಯಾದವ್ ಮತ್ತೆ ಕೆಲವು ಪೊಲೀಸ್ ಸಿಬ್ಬಂದಿ ಜತೆ ಅವರನ್ನು ಬಂಧಿಸಲು ತೆರಳಿದ್ದಾರೆ. ಆದರೆ ದರೋಡೆಕೋರರು ಅವರನ್ನು ಗನ್‌ನಿಂದ ಶೂಟ್ ಮಾಡಿದ್ದಾರೆ. 
 
ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಯಾದವ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ದರೋಡೆಕೋರರ ಜತೆಗಿನ ಗುಂಡಿನ ಚಕಮಕಿಯಲ್ಲಿ ಉಳಿದ ಪೊಲೀಸರಿಗೂ ಗಾಯಗಳಾಗಿವೆ. ಅವರಲ್ಲಿ ಪ್ರಮೋದ್ ಎಂಬುವವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 
ದರೋಡೆಕೋರರಲ್ಲಿ ಒಬ್ಬನನ್ನು ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು ಮತ್ತಿಬ್ಬರು ತಪ್ಪಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments