Select Your Language

Notifications

webdunia
webdunia
webdunia
webdunia

ಪ್ರತಿ ಸಂತ್ರಸ್ತ ಕುಟುಂಬಕ್ಕೆ 1.5 ಲಕ್ಷ ಪರಿಹಾರ

ಪ್ರತಿ ಸಂತ್ರಸ್ತ ಕುಟುಂಬಕ್ಕೆ 1.5 ಲಕ್ಷ ಪರಿಹಾರ
ಡೆಹ್ರಾಡೂನ್ , ಗುರುವಾರ, 12 ಜನವರಿ 2023 (10:33 IST)
ಡೆಹ್ರಾಡೂನ್ : ಭೂಮಿ ಕುಸಿತದಿಂದಾಗಿ ತತ್ತರಿಸುತ್ತಿರುವ ಉತ್ತರಾಖಂಡದ ಜೋಶಿಮಠದಲ್ಲಿ ಮನೆಗಳನ್ನು ಕಳೆದುಕೊಂಡಿರುವ ಸಂತ್ರಸ್ತ ಕುಟುಂಬಗಳಿಗೆ ಅಲ್ಲಿನ ಸರ್ಕಾರ ತಲಾ 1.5 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದೆ.

ಕಳೆದ ವರ್ಷ ಡಿಸೆಂಬರ್ನಲ್ಲಿ ಜೋಶಿಮಠದ ಕೆಲವೆಡೆ ಬಿರುಕುಗಳು ಒಂದೊಂದಾಗಿಯೇ ಕಾಣಿಸಿಕೊಳ್ಳಲು ಪ್ರಾರಂಭಿಸಿತ್ತು. ಕೆಲವು ದಿನಗಳಲ್ಲಿ ಇದರ ತೀವ್ರತೆ ಹೆಚ್ಚಾಗಿ, ದುರಂತವಾಗಿ ಮಾರ್ಪಟ್ಟಿತು.

ನಗರ ಮುಳುಗಡೆಯಾಗುವ ಭೀತಿಯಲ್ಲಿ ಅಲ್ಲಿನ ನಿವಾಸಿಗಳಿದ್ದು, ಅಪಾಯದ ಸ್ಥಿತಿಯಲ್ಲಿರುವ ಕಟ್ಟಡಗಳನ್ನು ನೆಲಸಮಗೊಳಿಸಲು ಸರ್ಕಾರ ಮುಂದಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಮೆರಿಕದಾದ್ಯಂತ ಎಲ್ಲಾ ವಿಮಾನಗಳ ಹಾರಾಟ ಸ್ಥಗಿತ