Webdunia - Bharat's app for daily news and videos

Install App

ಉತ್ತರಾಖಂಡ: ಬಂಡಾಯ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುವ ಸಾಧ್ಯತೆ

Webdunia
ಗುರುವಾರ, 12 ಮೇ 2016 (14:57 IST)
ಮಾತೃ ಪಕ್ಷ ಕಾಂಗ್ರೆಸ್‌‌ಗೆ ಮರಳುವ ಯಾವುದೇ ಸಾಧ್ಯತೆಗಳಿಲ್ಲದಿರುವುದರಿಂದ, ಉತ್ತರಾಖಂಡ್ ಬಂಡಾಯ ಶಾಸಕರು ಇನ್ನು ಕೆಲವು ದಿನಗಳಲ್ಲಿ ಬಿಜೆಪಿ ತೆಕ್ಕೆಗೆ ಸೇರುವ ಸಾಧ್ಯತೆ ದಟ್ಟವಾಗಿದೆ. 

 
 2014 ರಲ್ಲಿ  ಸೋಮೇಶ್ವರ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಶಾಸಕಿ ರೇಖಾ ಆರ್ಯ ಹೊರತುಪಡಿಸಿ ಉಳಿದ 9 ಜನ ಬಂಡಾಯ ಶಾಸಕರು ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ನಿರ್ಧರಿಸಲು ಬುಧವಾರ ದೆಹಲಿಯಲ್ಲಿ ಸಭೆ ಸೇರಿದ್ದರು. 
 
ಈ ಗುಂಪು ಗುರುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿಯಾಗಲು ತೀರ್ಮಾನಿಸಿದ್ದು , ಮೇ 13 ಅಥವಾ14 ರಂದು ಅವರು ಬಿಜೆಪಿ ಸೇರುತ್ತಾರೆ ಎಂಬುದಕ್ಕೆ ಬಲವಾದ ಸಂಕೇತ ದೊರಕಿದೆ.
 
ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಕೃಷಿ ಮಂತ್ರಿ ಹರಕ್ ಸಿಂಗ್ ರಾವತ್, ನಮ್ಮ ಮುಂದಿನ ನಡೆ ಕುರಿತು ಚರ್ಚಿಸಲು ನವದೆಹಲಿಯಲ್ಲಿ ಭೇಟಿಯಾಗಿದ್ದೆವು. ನಮಗೆರಡು ಆಯ್ಕೆಗಳಿವೆ. ಒಂದು ಬಿಜೆಪಿ ಸೇರುವುದು, ಇಲ್ಲ ಹೊಸ ರಾಜಕೀಯ ಪಕ್ಷವನ್ನು ಸೇರುವುದು ಎಂದಿದ್ದಾರೆ. 
 
ಆದರೆ ಕಾಂಗ್ರೆಸ್‌ಗೆ ಮರಳುವ ಸಾಧ್ಯತೆಗಳನ್ನು ಅವರು ಸ್ಪಷ್ಟವಾಗಿ ತಳ್ಳಿ ಹಾಕಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments