Webdunia - Bharat's app for daily news and videos

Install App

ಉದಯನಿಧಿ ಸ್ಟಾಲಿನ್ ತಲೆ ತಂದವರಿಗೆ 10 ಕೋಟಿ ಬಹುಮಾನ!?

Webdunia
ಮಂಗಳವಾರ, 5 ಸೆಪ್ಟಂಬರ್ 2023 (10:48 IST)
ಲಕ್ನೋ : ಅಯೋಧ್ಯೆಯ ಹಿಂದೂ ಧರ್ಮದರ್ಶಿಯೊಬ್ಬರು ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ತಲೆ ಕಡಿದು ತರುವಂತೆ 10 ಕೋಟಿ ರೂ. ಬಹುಮಾನ ಘೋಷಿಸಿ, ಅಪರಾಧ ಕೃತ್ಯಕ್ಕೆ ಪ್ರಚೋದನೆ ನೀಡಿದ್ದಾರೆ.
 
ಅಯೋಧ್ಯೆಯ ಧರ್ಮದರ್ಶಿ ಪರಮಹಂಸ ಆಚಾರ್ಯ, ಒಂದು ಕೈಯಲ್ಲಿ ಉದಯನಿಧಿಯ ಪೋಸ್ಟರ್, ಮತ್ತೊಂದು ಕೈಯಲ್ಲಿ ಕತ್ತಿ ಹಿಡಿದುಕೊಂಡು ಉದಯನಿಧಿ ಅವರ ಶಿರಚ್ಛೇದನವನ್ನು ಸಾಂಕೇತಿಕವಾಗಿ ಪ್ರದರ್ಶಿಸುವ ವೀಡಿಯೊವನ್ನ ಬಿಡುಗಡೆ ಮಾಡಿದ್ದಾರೆ.

ಪೋಸ್ಟರ್ಗೆ ಬೆಂಕಿ ಹಚ್ಚುವ ದೃಶ್ಯವನ್ನೂ ವೀಡಿಯೋದಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಡಿಎಂಕೆ ಸಚಿವರ ತಲೆ ಕಡಿದು ತಂದವರಿಗೆ 10 ಕೋಟಿ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಉದಯನಿಧಿ ಸ್ಟಾಲಿನ್, ಸ್ವಾಮೀಜಿಯೊಬ್ಬರು ನನ್ನ ತಲೆಗೆ 10 ಕೋಟಿ ರೂ. ಬೆಲೆ ಕಟ್ಟಿದ್ದಾರೆ. ಅವರು ನಿಜವಾದ ಸಂತನೋ ಅಥವಾ ನಕಲಿ ಸಂತನೋ? ನನ್ನ ತಲೆಯನ್ನ ಏಕೆ ಅಷ್ಟು ಇಷ್ಟಪಡುತ್ತೀರಿ? ನಿಮಗೆ ಇಷ್ಟು ಹಣ ಎಲ್ಲಿಂದ ಬರುತ್ತದೆ? ನನ್ನ ತಲೆ ಕೂದಲು ಬಾಚುವುದಕ್ಕೆ ಏಕೆ 10 ಕೋಟಿ ರೂ. ಘೋಷಣೆ ಮಾಡಿದ್ದೀರಿ? 10 ರೂಪಾತಿ ಬಾಚಣಿಗೆ ಕೊಟ್ಟರೆ ನಾನೇ ಬಾಚಿಕೊಳ್ಳುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments