Webdunia - Bharat's app for daily news and videos

Install App

ಪಡಿತರ ವಿತರಣೆ ವೇಳೆ ಕಾಲ್ತುಳಿತಕ್ಕೆ ಸಿಕ್ಕಿ 11 ಮಂದಿ ಸಾವು!

Webdunia
ಶನಿವಾರ, 1 ಏಪ್ರಿಲ್ 2023 (07:45 IST)
ಇಸ್ಲಾಮಾಬಾದ್ : ಉಚಿತ ಪಡಿತರ ವಿವತರಣೆ ವೇಳೆ ಕಾಲ್ತುಳಿತಕ್ಕೆ ಸಿಕ್ಕಿ ಮಹಿಳೆಯರು, ಮಕ್ಕಳು ಸೇರಿದಂತೆ 11 ಮಂದಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಪಾಕಿಸ್ತಾನದ ಕರಾಚಿ ನಗರದಲ್ಲಿ ಶುಕ್ರವಾರ ನಡೆದಿದೆ.
 
ಕರಾಚಿಯ ಸಿಂಧ್ ಇಂಡಸ್ಟ್ರಿಯಲ್ ಟ್ರೇಡಿಂಗ್ ಎಸ್ಟೇಟ್) ಪ್ರದೇಶದಲ್ಲಿ ಘಟನೆ ನಡೆದಿದ್ದು, 8 ಮಹಿಳೆಯರು ಹಾಗೂ ಮೂವರು ಮಕ್ಕಳು ಮೃತಪಟ್ಟಿದ್ದಾರೆ. ಇನ್ನೂ ಹಲವು ಮಂದಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. 

ಆರ್ಥಿಕವಾಗಿ ದಿವಾಳಿಯಾಗಿರುವ ಪಾಕಿಸ್ತಾನದಲ್ಲಿ ಉಚಿತ ಪಡಿತರ ಸಂಗ್ರಹಿಸಲು ಏಕಕಾಲಕ್ಕೆ ಸಾಕಷ್ಟು ಮಂದಿ ವಿತರಣಾ ಕೇಂದ್ರಕ್ಕೆ ನುಗ್ಗಿದ್ದಾರೆ. ಇದರಿಂದ ಕಾಲ್ತುಳಿತಕ್ಕೆ ಸಿಕ್ಕಿ ಜನ ಸಾವನ್ನಪ್ಪಿದ್ದಾರೆ. ಇನ್ನೂ ಕೆಲವರು ಗಾಯಗೊಂಡಿದ್ದಾರೆ. ಘಟನೆ ಸಂಬಂಧ 7 ಮಂದಿಯನ್ನ ಕರಾಚಿ ಪೊಲೀಸರು ಬಂಧಿಸಿದ್ದು, ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ದಿನ ಕಳೆದಂತೆ ಪಾಕಿಸ್ತಾನದಲ್ಲಿ ಆರ್ಥಿಕ ದಿವಾಳಿತನ ಹೆಚ್ಚಾಗುತ್ತಿದ್ದು, ಜನರು ಆಹಾರ ಸಾಮಗ್ರಿಗಳಿಗೂ ಪರದಾಡುವಂತಾಗಿದೆ. ಇತ್ತ ಆಹಾರ ಪದಾರ್ಥಗಳ ಬೆಲೆಯೂ ದುಬಾರಿಯಾಗಿರುವುದರಿಂದ ಟ್ರಕ್ಗಳು ಮತ್ತು ಪಡಿತರ ವಿತರಣಾ ಕೇಂದ್ರಗಳಿಂದ ಸಾವಿರಾರು ಚೀಲದಷ್ಟು ಗೋದಿ ಹಿಟ್ಟನ್ನ ಲೂಟಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments