Webdunia - Bharat's app for daily news and videos

Install App

ಪಡಿತರ ವಿತರಣೆ ವೇಳೆ ಕಾಲ್ತುಳಿತಕ್ಕೆ ಸಿಕ್ಕಿ 11 ಮಂದಿ ಸಾವು!

Webdunia
ಶನಿವಾರ, 1 ಏಪ್ರಿಲ್ 2023 (07:45 IST)
ಇಸ್ಲಾಮಾಬಾದ್ : ಉಚಿತ ಪಡಿತರ ವಿವತರಣೆ ವೇಳೆ ಕಾಲ್ತುಳಿತಕ್ಕೆ ಸಿಕ್ಕಿ ಮಹಿಳೆಯರು, ಮಕ್ಕಳು ಸೇರಿದಂತೆ 11 ಮಂದಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಪಾಕಿಸ್ತಾನದ ಕರಾಚಿ ನಗರದಲ್ಲಿ ಶುಕ್ರವಾರ ನಡೆದಿದೆ.
 
ಕರಾಚಿಯ ಸಿಂಧ್ ಇಂಡಸ್ಟ್ರಿಯಲ್ ಟ್ರೇಡಿಂಗ್ ಎಸ್ಟೇಟ್) ಪ್ರದೇಶದಲ್ಲಿ ಘಟನೆ ನಡೆದಿದ್ದು, 8 ಮಹಿಳೆಯರು ಹಾಗೂ ಮೂವರು ಮಕ್ಕಳು ಮೃತಪಟ್ಟಿದ್ದಾರೆ. ಇನ್ನೂ ಹಲವು ಮಂದಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. 

ಆರ್ಥಿಕವಾಗಿ ದಿವಾಳಿಯಾಗಿರುವ ಪಾಕಿಸ್ತಾನದಲ್ಲಿ ಉಚಿತ ಪಡಿತರ ಸಂಗ್ರಹಿಸಲು ಏಕಕಾಲಕ್ಕೆ ಸಾಕಷ್ಟು ಮಂದಿ ವಿತರಣಾ ಕೇಂದ್ರಕ್ಕೆ ನುಗ್ಗಿದ್ದಾರೆ. ಇದರಿಂದ ಕಾಲ್ತುಳಿತಕ್ಕೆ ಸಿಕ್ಕಿ ಜನ ಸಾವನ್ನಪ್ಪಿದ್ದಾರೆ. ಇನ್ನೂ ಕೆಲವರು ಗಾಯಗೊಂಡಿದ್ದಾರೆ. ಘಟನೆ ಸಂಬಂಧ 7 ಮಂದಿಯನ್ನ ಕರಾಚಿ ಪೊಲೀಸರು ಬಂಧಿಸಿದ್ದು, ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ದಿನ ಕಳೆದಂತೆ ಪಾಕಿಸ್ತಾನದಲ್ಲಿ ಆರ್ಥಿಕ ದಿವಾಳಿತನ ಹೆಚ್ಚಾಗುತ್ತಿದ್ದು, ಜನರು ಆಹಾರ ಸಾಮಗ್ರಿಗಳಿಗೂ ಪರದಾಡುವಂತಾಗಿದೆ. ಇತ್ತ ಆಹಾರ ಪದಾರ್ಥಗಳ ಬೆಲೆಯೂ ದುಬಾರಿಯಾಗಿರುವುದರಿಂದ ಟ್ರಕ್ಗಳು ಮತ್ತು ಪಡಿತರ ವಿತರಣಾ ಕೇಂದ್ರಗಳಿಂದ ಸಾವಿರಾರು ಚೀಲದಷ್ಟು ಗೋದಿ ಹಿಟ್ಟನ್ನ ಲೂಟಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: ಮೊದಲು ಅನಾಮಿಕನ ಗುರುತು ಬಹಿರಂಗಪಡಿಸಲಿ, ಅಶೋಕ್ ಒತ್ತಾಯ

ಉತ್ತರಕಾಶಿಯ ಮೇಘಸ್ಪೋಟದಿಂದ ಸುಧಾರಿಸುತ್ತಿರುವ ಬೆನ್ನಲ್ಳೇ ಜಮ್ಮು, ಕಾಶ್ಮೀರದಲ್ಲಿ ಬೃಹತ್ ಮೇಘಸ್ಫೋಟ

79ನೇ ಸ್ವಾತಂತ್ರ್ಯ ದಿನಾಚರಣೆ: ನವದೆಹಲಿಯಲ್ಲಿ ರೈಲು ನಿಲ್ದಾಣದಲ್ಲೂ ಬಿಗಿ ಭದ್ರತೆ

ಮುಸ್ಲಿಂ ಯುವತಿಯನ್ನು ಹಿಂದೂ ಯುವಕ ಮದುವೆಯಾದಲ್ಲಿ ₹5ಲಕ್ಷ: ಬಸನಗೌಡ ಪಾಟೀಲ್ ಬಿಗ್‌ ಶಾಕ್‌

ಧರ್ಮಸ್ಥಳ: ವರಸೆ ಬದಲಾಯಿಸಿದ ಮಾಸ್ಕ್‌ಮ್ಯಾನ್‌, ಬೇರೆಡೆ ಹೊರಟ ಎಸ್‌ಐಟಿ ತಂಡ

ಮುಂದಿನ ಸುದ್ದಿ
Show comments