ಸಿಎಂ ಪತ್ತೆಗೆ 11 ಸಾವಿರ ರೂ. ಬಹುಮಾನ ಘೋಷಿಸಿದ ಬಿಜೆಪಿ

geetha
ಮಂಗಳವಾರ, 30 ಜನವರಿ 2024 (18:00 IST)
ಜಾರ್ಖಂಡ್‌ :ಅಕ್ರಮ ಹಣ ವರ್ಗಾವಣೆ ಹಗರಣದಲ್ಲಿ ಜಾರಿ ನಿರ್ದೇಶನಾಲಯವು ಸಿಎಂ ಹೇಮಂತ್‌ ಸೊರೇನ್‌ ರಿಗೆ ನೊಟೀಸ್‌ ನೀಡಿತ್ತು. ಆದರೆ ಕಳೆದ 24 ತಾಸಿನಿಂದ ಹೇಮಂತ್‌ ಸೊರೇನ್‌ ನಾಪತ್ತೆಯಾಗಿದ್ದು, ಖಾಸಗಿ ವಿಮಾನದ ಮೂಲಕ ರಾಂಚಿಯಿಂದ ದೆಹಲಿ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿದ್ದಾರೆನ್ನಲಾಗಿದೆ. ಜಾರ್ಖಂಡ್‌ ಮುಕ್ತಿ ಮೋರ್ಚಾದ ನಾಯಕರು ಹೇಮಂತ್‌ ಸೊರೇನ್‌ ನಮ್ಮೊಡನೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.  

ಸಿಎಂ ಹೇಮಂತ್‌ ಸೊರೇನ್‌ ಪತ್ತೆ ಸುಳಿವು ನೀಡಿದವರಿಗೆ 11 ಸಾವಿರ ರೂ. ಬಹುಮಾನ ನೀಡುವುದಾಗಿ ಜಾರ್ಖಂಡ್‌ ಬಿಜೆಪಿ ಅಧ್ಯಕ್ಷ ಬಾಬುಲಾಲ್‌ ಮರಾಂಡಿ ಘೋಷಿಸಿದ್ದಾರೆ. ಸಿಎಂ ಎಲ್ಲಿದ್ದಾರೆ ಎಂದು ಸ್ವತಃ ಅವರ ಪಕ್ಷದ ಕಾರ್ಯಕರ್ತರಿಗೇ ಗೊತ್ತಿಲ್ಲ ಎಂದು ಟೀಕಿಸಿರುವ ಬಾಬು ಲಾಲ್‌ ಮರಾಂಡಿ, ರಾಜ್ಯದ ಮುಖ್ಯಮಂತ್ರಿಯೇ ಈ ರೀತಿ ಗೊತ್ತುಗುರಿಯಿಲ್ಲದೇ ಓಡಿ ಹೋಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು. 

ದೆಹಲಿ ವಿಮಾನ ನಿಲ್ದಾಣದಲ್ಲಿ ಸೊರೇನ್‌ ರಿಗೆ ಸೇರಿದ ಬಿಎಂಡಬ್ಲ್ಯು ಕಾರ್‌, 36 ಲಕ್ಷ ರೂ. ಹಣವನ್ನು ವಶಪಡಿಸಿಕೊಂಡಿರುವ ಇ.ಡಿ ಅಧಿಕಾರಿಗಳು ಸಿಎಂ ಚಾಲಕನನ್ನು ವಿಚಾರಣೆಗೊಳಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments