Webdunia - Bharat's app for daily news and videos

Install App

11 ವರ್ಷದ ಬಾಲಕನಿಂದ ಬ್ಯಾಂಕ್ ದರೋಡೆ!

ಅಪರಾಧ ಸುದ್ದಿಗಳು
Webdunia
ಗುರುವಾರ, 1 ಅಕ್ಟೋಬರ್ 2020 (10:32 IST)
ಹರ್ಯಾಣ: 11 ವರ್ಷದ ಬಾಲಕ ಬ್ಯಾಂಕ್ ನಿಂದ ಸುಮಾರು 20 ಲಕ್ಷ ರೂ. ದೋಚಿ ಯಾರಿಗೂ ಗೊತ್ತಾಗದಂತೆ ಪರಾರಿಯಾದ ಘಟನೆ ಹರ್ಯಾಣದ ಜಿಂದ್ ನಲ್ಲಿ ನಡೆದಿದೆ.


ಇಲ್ಲಿನ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಈ ಘಟನೆ ನಡೆದಿದೆ. ಬ್ಯಾಂಕ್ ನಲ್ಲಿ ಜನಜಂಗುಳಿಯಿದ್ದಾಗ ಇನ್ನೊಬ್ಬ ಆರೋಪಿಯೊಂದಿಗೆ ಬಂದಿದ್ದ ಈತ ಯಾರಿಗೂ ಗೊತ್ತಾಗದಂತೆ ಕ್ಯಾಶಿಯರ್ ಕ್ಯಾಬಿನ್ ಗೆ ನುಗ್ಗಿ ತಲಾ 5 ಲಕ್ಷ ರೂ.ಗಳ ನೋಟುಗಳ ಬಂಡಲ್ ಬ್ಯಾಗ್ ಗೆ ತುಂಬಿ ಸದ್ದಿಲ್ಲದೇ ಜಾಗ ಖಾಲಿ ಮಾಡಿದ್ದ. ಸಂಜೆ ವೇಳೆ ಬ್ಯಾಂಕ್ ಸಿಬ್ಬಂದಿ ನೋಟುಗಳ ಲೆಕ್ಕಾಚಾರ ಮಾಡುವಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣವೇ ಪೊಲೀಸರಿಗೆ ಸುದ್ದಿ ಮುಟ್ಟಿಸಲಾಗಿದೆ. ಪೊಲೀಸರು ಸಿಸಿಟಿವಿ ಫೂಟೇಜ್ ಪರಿಶೀಲಿಸುವಾಗ 11 ವರ್ಷದ ಬಾಲಕ ಹಾಗೂ ಇನ್ನೊಬ್ಬ ವ್ಯಕ್ತಿ ಬ್ಯಾಗ್ ನೊಂದಿಗೆ ಪರಾರಿಯಾಗುತ್ತಿರುವುದು ಕಂಡುಬಂದಿದೆ. ಅರೆಕ್ಷಣ ಕ್ಯಾಶಿಯರ್ ತನ್ನ ಸೀಟ್ ನಿಂದ ಎದ್ದು ಅತ್ತ ಕಡೆ ಹೋಗುವಾಗ ಕ್ಯಾಬಿನ್ ಬಂದ್ ಮಾಡಲು ಮರೆತಿದ್ದ. ಈ ವೇಳೆ ಬಾಲಕ ಕೈ ಚಳಕ ತೋರಿದ್ದಾನೆ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral video: ಬೆಂಗಳೂರು ಡಿಆರ್ ಡಿಒ ಆಫೀಸರ್ ಮೇಲೆ ಕನ್ನಡಿಗನಿಂದ ಹಲ್ಲೆ ಕೇಸ್ ಗೆ ಟ್ವಿಸ್ಟ್: ಅಸಲಿಗೆ ನಡೆದದ್ದೇ ಬೇರೆಯೇ

DGP Om Prakash murder: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಪತ್ನಿಗಿತ್ತು ಈ ಮಾನಸಿಕ ಕಾಯಿಲೆ

ಅಲಿಬಾಬ ಮತ್ತು 40 ಕಳ್ಳರ ಕಥೆಯ ತದ್ರೂಪವೇ ಸಿದ್ದರಾಮಯ್ಯರ ತಂಡ: ಡಿ.ವಿ. ಸದಾನಂದಗೌಡ

ಕಾಂಗ್ರೆಸ್ ಸರಕಾರವು ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ: ಬಿ.ವೈ.ವಿಜಯೇಂದ್ರ

DGP Om Prakash murder: ಮೀನು ಊಟ ಮಾಡುತ್ತಿರುವಾಗಲೇ ಓಂ ಪ್ರಕಾಶ್ ಮೇಲೆ ನಡೆದಿತ್ತು ಡೆಡ್ಲೀ ಅಟ್ಯಾಕ್

ಮುಂದಿನ ಸುದ್ದಿ
Show comments