Webdunia - Bharat's app for daily news and videos

Install App

ನಾಯಿಮರಿ ರಕ್ಷಿಸಲು ಹೋಗಿ 9ನೇ ಮಹಡಿಯಿಂದ ಬಿದ್ದು ಬಾಲಕಿ ಸಾವು!

Webdunia
ಗುರುವಾರ, 26 ಆಗಸ್ಟ್ 2021 (14:40 IST)

ಬಾಲ್ಕನಿಯಲ್ಲಿ ಸಿಲುಕಿದ್ದ ನಾಯಿಮರಿಯನ್ನು ರಕ್ಷಿಸಲು ಹೋಗಿ 12 ವರ್ಷದ ಬಾಲಕಿ 9ನೇ ಮಹಡಿಯಿಂದ ಬಿದ್ದು ಮೃತಪಟ್ಟ ಆಘಾತಕಾರಿ ಘಟನೆ ಉತ್ತರಪ್ರದೇಶದ ಗಾಜಿಯಾಬಾದ್ ನಲ್ಲಿ ಸಂಭವಿಸಿದೆ.

7ನೇ ತರಗತಿ ವಿದ್ಯಾರ್ಥಿನಿ ಜ್ಯೋತ್ಸನಾ ಮೃತಪಟ್ಟ ದುರ್ದೈವಿ. ಈಕೆ ಮನೆಯೊಳಗೆ ನಾಯಿಮರಿ ಜೊತೆ ಆಟವಾಡುತ್ತಿದ್ದಳು. ಈ ವೇಳೆ ನಾಯಿಮರಿ ಬಾಲ್ಕನಿಯ ಕಿಟಕಿಗೆ ಹಾಕಿದ್ದ ನೆಟ್ ಒಳಗೆ ಸಿಲುಕಿಕೊಂಡಿತ್ತು. ನೆಟ್ ಬಿಡಿಸುವಾಗ ಆಯತಪ್ಪಿ ಮಹಡಿ ಮೇಲಿಂದ ಬಿದ್ದು ಮೃತಪಟ್ಟಿದ್ದಾಳೆ.

ತಾಯಿ ಕಿರಣ್ ಮನೆಯೊಳಗೆ ಇದ್ದು ಅಡುಗೆ ಮಾಡುತ್ತಿದ್ದರು. ಮಗು ಕಿರುಚಿದ ಶಬ್ಧ ಕೇಳಿ ಓಡಿ ಬರುವಷ್ಟರಲ್ಲಿ ದುರಂತ ಸಂಭವಿಸಿಬಿಟ್ಟಿತ್ತು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಗುವನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಯಾವುದೇ ಪ್ರಯೋಜನ ಆಗಲಿಲ್ಲ ಎಂದು ತಿಳಿದು ಬಂದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments