Webdunia - Bharat's app for daily news and videos

Install App

ನಾಲ್ವರು ಕಾಮುಕರ ಜತೆ ಸೆಣಸಾಡಿ ತಾಯಿಯನ್ನು ರಕ್ಷಿಸಿದ ಬಾಲಕಿ

Webdunia
ಮಂಗಳವಾರ, 3 ಜನವರಿ 2017 (12:28 IST)
12 ವರ್ಷದ ಬಾಲಕಿಯೋರ್ವಳು ತನ್ನ ತಾಯಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ನಾಲ್ವರು ಕೀಚಕರ ಜತೆ ಕಾದಾಡಿ ಆಕೆಯನ್ನು ರಕ್ಷಿಸಿದ ಧೀರೋದಾತ್ತ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಮಗಳ ಸಾಹಸದಿಂದ ತಾಯಿ ಅತ್ಯಾಚಾರದಿಂದ ತಪ್ಪಿಸಿಕೊಂಡಿದ್ದಾಳೆ, ಆದರೆ ಆಕೆಯ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಚುಚ್ಚಿದ ಗಾಯಗಳಾಗಿವೆ.

 
ಘಟನೆ ವಿವರ: ಭಾನುವಾರ ರಾತ್ರಿ ತಾಯಿ ತನ್ನಿಬ್ಬರು ಮಕ್ಕಳ ಜತೆ ಹೊಲದಲ್ಲಿ ನಡೆದುಕೊಂಡು ಹೋಗುತ್ತಿರುವಾಗ ನಾಲ್ವರು ಕಾಮುಕರು ಆಕೆಯ ಮೇಲೆ ಮುಗಿಬಿದ್ದಿದ್ದಾರೆ. ಆಕೆಯನ್ನು ಹತ್ತಿರದ ಗುಡಿಸಲೊಂದಕ್ಕೆ ಎಳೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ನಡೆಸಲು ಯತ್ನಿಸಿದ್ದಾರೆ. ಆದರೆ ಆಕೆಯ ಮಗಳು ಕಾಮುಕರ ಜತೆ ಸೆಣಸಾಟ ನಡೆಸಿದ್ದಾಳೆ. ಅವರು ತಾಯಿ ಮತ್ತು ಮಗಳ ಮೇಲೆ ಹಲ್ಲೆ ನಡೆಸಿದ್ದಾರೆ. ತಾಯಿ ಮಗಳು ಸಹಾಯಕ್ಕಾಗಿ ಕಿರುಚುತ್ತಿರುವುದನ್ನು ಕೇಳಿದ ಗ್ರಾಮಸ್ಥರು ಅಲ್ಲಿಗೋಡಿ ಬರುತ್ತಿದ್ದಂತೆ ಆರೋಪಿಗಳು ಪರಾರಿಯಾಗಿದ್ದಾರೆ. 
 
ನಾಲ್ವರು ಆರೋಪಿಗಳು ಸಹ ಅದೇ ಗ್ರಾಮದವರಾಗಿದ್ದು ಘಟನೆ ಬಳಿಕ ನಾಪತ್ತೆಯಾಗಿರುವ ಅವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
 
ಗ್ರಾಮದ ಕೆಲವರು ಇದು ರಾಜಕೀಯ ದ್ವೇಷದಿಂದ ನಡೆದ ಕೃತ್ಯ ಎನ್ನುತ್ತಿದ್ದರೆ ಮತ್ತೆ ಕೆಲವರು ಆಸ್ತಿ ವಿವಾದಕ್ಕೆ ಸಂಬಂಧಿಸಿದ ಪ್ರಕರಣ ಎನ್ನುತ್ತಿದ್ದಾರೆ.
 
ಪೀಡಿತ ತಾಯಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು ತೀವ್ರ ನಿಗಾವಣೆಯಲ್ಲಿಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments