Webdunia - Bharat's app for daily news and videos

Install App

ಸ್ಮಾರ್ಟ್ ಫೋನ್ ಕೊಡಿಸಲಿಲ್ಲವೆಂದು ಬಾಲಕ ಆತ್ಮಹತ್ಯೆ

Webdunia
ಗುರುವಾರ, 19 ಜನವರಿ 2017 (10:40 IST)
ಪೋಷಕರು ಸ್ಮಾರ್ಟ್ ಫೋನ್ ಕೊಡಿಸಲಿಲ್ಲವೆಂಬ ಕೋಪಕ್ಕೆ 14 ವರ್ಷದ ಬಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ತೆಲಂಗಾಣದ ಜಗ್ತಿಯಾಲ ಜಿಲ್ಲೆಯಲ್ಲಿ ನಡೆದಿದೆ.
ಕರೀಮ್‌‌ನಗರದಿಂದ 40 ಕಿ.ಮೀ. ದೂರದಲ್ಲಿರುವ ರೈಕಲ್‌ ಮಂಡಲ್ ಹೆಡ್‌ಕ್ವಾಟರ್ಸ್‌ನಲ್ಲಿ ಈ ಘಟನೆ ನಡೆದಿದ್ದು, ಮೃತನನ್ನು 9ನೇ ತರಗತಿ ಓದುತ್ತಿದ್ದ ರೈಕಲ್ ಗ್ರಾಮದ ಪಿತ್ಲಾ ಲಿಂಗಮೂರ್ತಿ ಎಂದು ಗುರುತಿಸಲಾಗಿದೆ. 
 
ಮಂಗಳವಾರ ರಾತ್ರಿ ಬಾಲಕ ತನಗೆ ಸ್ಮಾರ್ಟ್ ಫೋನ್ ಬೇಕೆಂದು ಪೋಷಕರಲ್ಲಿ ಕೇಳಿದ್ದಾನೆ. ಆದರೆ ಫೋಷಕರು ನಿರಾಕರಿಸಿದ್ದಾರೆ. ಇದರಿಂದ ಮನನೊಂದ ಬಾಲಕು ತಾನು ಸಾಯುವುದಾಗಿ ಹೇಳಿ ಮನೆಯಿಂದ ಹೊರ ನಡೆದಿದ್ದಾನೆ. ಆದರೆ ಆತನನ್ನು ಮಾತನ್ನು ಪೋಷಕರು ಗಂಭೀರವಾಗಿ ತೆಗೆದುಕೊಂಡಿಲ್ಲ. 
 
ಆದರೆ ಮನೆಯಿಂದ ಹೊರಗೆ ಹೋಗಿದ್ದ ಮಗ ಎಷ್ಟು ಹೊತ್ತಾದರೂ ಮರಳದಿದ್ದಾಗ ಆತನಿಗಾಗಿ ಶೋಧ ನಡೆಸಲಾಗಿದೆ. ಆದರೆ ಮರುದಿನ ಮುಂಜಾನೆ ಆತನ ದೇಹ ಶಾಲೆಯ ಕಟ್ಟಡದ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದೆ. 
 
ಬಾಲಕನ ದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಪೋಷಕರಿಗೆ ನೀಡಲಾಗಿದೆ. 
 
ಪೊಲೀಸರು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments