Webdunia - Bharat's app for daily news and videos

Install App

ಪ್ರತ್ಯುತ್ತರ: 15 ಪಾಕ್ ಸೈನಿಕರು ಯಮಪುರಿಗೆ

Webdunia
ಶುಕ್ರವಾರ, 28 ಅಕ್ಟೋಬರ್ 2016 (15:17 IST)
ಸರ್ಜಿಕಲ್ ದಾಳಿ ಬಳಿಕ ಪದೇ ಕದನ ವಿರಾಮ ಉಲ್ಲಂಘಿಸುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೈನಿಕರು ತಕ್ಕ ಪ್ರತ್ಯುತ್ತರ ನೀಡಿದ್ದು, 15 ಪಾಕ್ ಸೈನಿಕರನ್ನು ಯಮಪುರಿಗಟ್ಟಿದ್ದಾರೆ. 

ಇಂದು ಬೆಳಿಗ್ಗೆ ಕೂಡ ಪಾಕ್ ರೇಂಜರ್‌ಗಳು ಜಮ್ಮು ಮತ್ತು ಕಾಶ್ಮೀರದ ಮೇಂದಾರ್ ಸೆಕ್ಟರ್‌ನಲ್ಲಿ ಗುಂಡಿನ ದಾಳಿ ನಡೆಸಿದ್ದರು. ಪ್ರಚೋದನೆಗೆ ತಕ್ಕ ಪ್ರತ್ಯುತ್ತರ ನೀಡಿದ ಭಾರತೀಯ ಸೈನಿಕರು 15 ಪಾಕ್ ಸೈನಿಕರನ್ನು ಹತ್ಯೆಗೈದಿದ್ದಾರೆ. ಬಿಎಸ್ಎಫ್ ಅಧಿಕಾರಿಗಳು ಇದನ್ನು ಸ್ಪಷ್ಟ ಪಡಿಸಿದ್ದಾರೆ. 
 
ಗುರುವಾರ ಸಹ ಬಿಎಸ್‌ಎಫ್ ಯೋಧರ ಗುಂಡಿಗೆ ಒಬ್ಬ ಪಾಕ್ ಸೈನಿಕ ಮೃತ ಪಟ್ಟು ಮತ್ತೊಬ್ಬ ಗಾಯಗೊಂಡಿದ್ದ. 
 
ಇಂದು ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಾಗರಿಕರು ಮೃತಪಟ್ಟಿದ್ದಾರೆ. 
 
ನಿನ್ನೆಯಿಂದ ಗಡಿ ನಿಯಂತ್ರಣ ರೇಖೆ, ಜಮ್ಮು, ಕಥುವಾ ಮತ್ತು ರಾಜೌರಿ ಜಿಲ್ಲೆಗಳ ಅಂತರಾಷ್ಟ್ರೀಯ ಗಡಿ ಭಾಗದಲ್ಲಿ ಅಪ್ರಚೋದಿತ ದಾಳಿ ನಡೆಸುತ್ತಿದೆ. ನಿನ್ನೆ ಬಿಎಸ್ಎಫ್ ಯೋಧರೊಬ್ಬರು ಹುತಾತ್ಮರಾಗಿದ್ದು 13 ನಾಗರಿಕರು ಗಾಯಗೊಂಡಿದ್ದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments