Webdunia - Bharat's app for daily news and videos

Install App

ಪ್ರಸಾದ ತಿಂದು 150 ಜನ ಆಸ್ಪತ್ರೆ ಪಾಲು

Webdunia
ಶನಿವಾರ, 11 ಫೆಬ್ರವರಿ 2017 (17:35 IST)
ದೇವಸ್ಥಾನದಲ್ಲಿ ನೀಡಲಾಗಿದ್ದ ಪ್ರಸಾದ ತಿಂದು ಮಕ್ಕಳು ಸೇರಿದಂತೆ ಸುಮಾರು 150 ಜನರು ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. 
 

ಶುಕ್ರವಾರ ರಾತ್ರಿ ಜಿಲ್ಲೆಯ ಪಚಾನೆ ಗ್ರಾಮದಲ್ಲಿ ಉರುಸ್ ನಡೆಯುತ್ತಿತ್ತು. ಉತ್ಸವದಲ್ಲಿ ಪಾಲ್ಗೊಂಡಿದ್ದ ಸಾವಿರಾರು ಜನರಿಗೆ ಸಿಹಿ ಪ್ರಸಾದವನ್ನು ವಿತರಿಸಲಾಗಿತ್ತು. ಅದನ್ನು ತಿಂದ ಬಳಿಕ ಸುಮಾರು 150 ಜನರು ವಾಂತಿಬೇಧಿ ಸೇರಿದಂತೆ ವಿಷಾಹಾರ ಸೇವನೆಯ ಪರಿಣಾಮ ಕಾಣಿಸಿಕೊಳ್ಳುವ ತೊಂದರೆಗೊಳಗಾದರು. ತಕ್ಷಣ ಅವರನ್ನು ಮಾವಲ್ ತೆಹ್ಸಿಲ್‌ನ ವಿವಿಧ ಆಸ್ಪತ್ರೆಗೆ ಸೇರಿಸಲಾಯಿತು. 
 
ಮೊದ ಮೊದಲು ಕೆಲವು ಜನರಿಗಷ್ಟೇ ಸಮಸ್ಯೆ ಕಾಣಿಸಿಕೊಂಡಿತು. ಬಳಿಕ ಆಸ್ಪತ್ರೆಗೆ ಅಸ್ವಸ್ಥರ ದಂಡೇ ಹರಿದು ಬಂತು. ಹೀಗಾಗಿ ಗ್ರಾಮದಲ್ಲೇ ಮೆಡಿಕಲ್ ಕ್ಯಾಂಪ್ ಹಾಕಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು 
ಆರೋಗ್ಯ ಅಧಿಕಾರಿ ಡಾ. ಚಂದ್ರಕಾಂತ್ ಲೋಹರ ತಿಳಿಸಿದ್ದಾರೆ. 
 
ಹೆಚ್ಚಿನ ಜನರು ಚಿಕಿತ್ಸೆ ಪಡೆದ ಬಳಿಕ ಡಿಸ್ಚಾರ್ಜ್ ಆಗಿದ್ದಾರೆ. ಆದರೆ ಸುಮಾರು 50ಕ್ಕೂ ಹೆಚ್ಚು ಜನರು ಈಗಲೂ ಆಸ್ಪತ್ರೆಯಲ್ಲಿದ್ದಾರೆ. ಪರಿಸ್ಥಿತಿ ಈಗ ಹತೋಟಿಯಲ್ಲಿದೆ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.
 
ಪ್ರಸಾದವನ್ನು ಪರೀಕ್ಷೆಗೆಂದು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments