Webdunia - Bharat's app for daily news and videos

Install App

ಗುಜರಾತ್‌ನಲ್ಲಿ ರಣಭೀಕರ ಮಳೆಗೆ 16ಬಲಿ, 23ಸಾವಿರ ಮಂದಿ ಸ್ಥಳಾಂತರ

Sampriya
ಬುಧವಾರ, 28 ಆಗಸ್ಟ್ 2024 (19:48 IST)
Photo Courtesy X
ಅಹಮದಾಬಾದ್: ಗುಜರಾತ್‌ನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಇದುವರೆಗೆ 15ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಸುರಕ್ಷತೆ ದೃಷ್ಟಿಯಿಂದ 23,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ ಮತ್ತು ಕರಾವಳಿ ರಾಜ್ಯದಾದ್ಯಂತ ವಿವಿಧ ಜಿಲ್ಲೆಗಳಿಂದ 300 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ.

ಬುಧವಾರ ಸತತ ನಾಲ್ಕನೇ ದಿನವೂ ಭಾರೀ ಮಳೆ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ತಗ್ಗುಪ್ರದೇಶಗಳಿಗೆ ನೀರು ನುಗ್ಗಿದ್ದು, ನಿರಂತರ ಮಳೆಯಿಂದಾಗಿ ಅಣೆಕಟ್ಟುಗಳು ಮತ್ತು ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.

ರಾಜ್ಯ ಪರಿಹಾರ ಇಲಾಖೆಯ ಪ್ರಕಾರ, ಸೋಮವಾರ ಮಳೆ ಸಂಬಂಧಿತ ಘಟನೆಗಳಲ್ಲಿ ಏಳು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇದುವರೆಗೆ ಮೃತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.

ಇದಲ್ಲದೆ, ಮೋರ್ಬಿಯ ಧವಾನಾ ಗ್ರಾಮದಲ್ಲಿ ಪ್ರವಾಹದ ಹೊಳೆಯಲ್ಲಿ ಅವರು ಪ್ರಯಾಣಿಸುತ್ತಿದ್ದ ಟ್ರ್ಯಾಕ್ಟರ್-ಟ್ರೇಲರ್ ಕೊಚ್ಚಿಹೋದ ನಂತರ ಭಾನುವಾರ ರಾತ್ರಿ ಕಾಣೆಯಾದ ಎಂಟು ಮಂದಿ ಪೈಕಿ ಮೂವರ ಶವಗಳು ಮಂಗಳವಾರ ಪತ್ತೆಯಾಗಿವೆ ಎಂದು ಮೊರ್ಬಿ ಕಲೆಕ್ಟರ್ ಕೆ ಬಿ ಜವೇರಿ ತಿಳಿಸಿದ್ದಾರೆ.

ಇನ್ನೂ ಐವರು ನಾಪತ್ತೆಯಾಗಿದ್ದಾರೆ ಮತ್ತು ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ (ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ) ತಂಡಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ ಎಂದು ಅವರು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಮುಂದಿನ ಸುದ್ದಿ
Show comments